ಬೇಸಿಗೆಗೆ ಆರೋಗ್ಯಕಾರಿ ಮೆಂತ್ಯ ಸೊಪ್ಪಿನ ಬಾತ್

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವ ಮತ್ತು ಆರೋಗ್ಯಕಾರಿಯಾದ ತಿನಿಸುಗಳನ್ನು ಮಾಡಿ ಸೇವಿಸುವುದನ್ನು ರೂಢಿಸಿಕೊಳ್ಳುವುದು ಉತ್ತಮ. ಹೀಗಾಗಿ ನಾವು ಮಾಡುವ ಹಲವು ಬಾತ್ ಗಳ ಪೈಕಿ ಮೆಂತೆ ಬಾತ್ ಗೆ ಆದ್ಯತೆ ನೀಡಿದರೆ ಒಳ್ಳೆಯದು.

ಮೆಂತೆ ಬಾತ್ ಗೆ ಏನೇನು ಬೇಕು?: ಅಕ್ಕಿ- ಒಂದು ಕಪ್,  ಮೆಂತ್ಯ ಸೊಪ್ಪು- ಎರಡು ಕಟ್ಟು, ಬೆಳ್ಳುಳ್ಳಿ-2,  ಮೆಣಸಿನಕಾಯಿ- 5, ಕರಿಮೆಣಸು- 4, ಕಾಯಿತುರಿ- ಸ್ವಲ್ಪ, ಕೊತ್ತಂಬರಿಸೊಪ್ಪು- ಸ್ವಲ್ಪ, ಹಸಿಶುಂಠಿ- ಒಂದು ತುಂಡು, ಈರುಳ್ಳಿ- 1 ಲವಂಗ- ಸ್ವಲ್ಪ, ಏಲಕ್ಕಿ ಪುಡಿ- ಚಿಟಿಕೆಯಷ್ಟು.

ತಯಾರಿ ಮಾಡುವುದು ಹೀಗೆ: ಮೊದಲಿಗೆ ಎಲ್ಲ ಪದಾರ್ಥಗಳನ್ನು ಜೋಡಿಸಿಟ್ಟುಕೊಂಡು,  ಮೊದಲಿಗೆ ಮೆಂತ್ಯ ಸೊಪ್ಪನ್ನು ಹೊರತು ಪಡಿಸಿ ಉಳಿದ ಎಲ್ಲ ಮಸಾಲೆ ಪದಾರ್ಥಗಳನ್ನು ಮಿಕ್ಸಿಯಲ್ಲಿ ಹಾಕಿ ಚೆನ್ನಾಗಿ ರುಬ್ಬಿಟ್ಟುಕೊಳ್ಳಿ. ಇನ್ನೊಂದೆಡೆ ಎರಡು ಕಪ್ ನೀರನ್ನು ಕುದಿಸಿಟ್ಟುಕೊಳ್ಳಿ.

ಮೊದಲಿಗೆ ಕುಕ್ಕರ್‌ನಲ್ಲಿ ಸ್ವಲ್ಪ ಎಣ್ಣೆ ಹಾಕಿ ನಂತರ ಸ್ವಲ್ಪ ಈರುಳ್ಳಿ ಚೂರು ಹಾಕಿ ಬಾಡಿಸಿ ಅದಕ್ಕೆ ಮೆಂತೆ ಸೊಪ್ಪನ್ನು  ಹಾಕಿ ಚೆನ್ನಾಗಿ ಬಾಡಿಸಬೇಕು. ಇದಕ್ಕೆ ಚೂರು ಲವಂಗ, ಏಲಕ್ಕಿ ಪುಡಿಯನ್ನು ಸೇರಿಸಿ ಜತೆಗೆ ರುಬ್ಬಿಟ್ಟ ಮಸಾಲೆ ಪದಾರ್ಥಗಳನ್ನು ಹಾಕಿ ಬಳಿಕ ಅಕ್ಕಿಯನ್ನು ತೊಳೆದು ಹಾಕಬೇಕು.

ಆ ನಂತರ ಕುದಿಸಿದ  ಬಿಸಿ ನೀರನ್ನು  ಹಾಕಿ ಮಿಕ್ಸ್ ಮಾಡಿ ಕುಕ್ಕರ್ ಮುಚ್ಚಳ ಮುಚ್ಚಿ ಎರಡು  ವಿಷಲ್ ಕೂಗಿಸಿ ಇಳಿಸಿದ ಬಳಿಕ ಕೊತ್ತಂಬರಿ ಸೊಪ್ಪು ಉದುರಿಸಿದರೆ  ಮೆಂತ್ಯ ಸೊಪ್ಪಿನ ಬಾತ್  ರೆಡಿಯಾದಂತೆಯೇ…

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

30 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

47 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago