ರಾತ್ರಿ ಉಳಿದ ಅನ್ನದಲ್ಲಿ ಮಾಡಿ ಬೊಂಬಾಟ್ ಮಶ್ರೂಮ್ ಫ್ರೈಡ್‌ರೈಸ್

ರಾತ್ರಿ ಉಳಿದ ಅನ್ನದಿಂದ ಬೊಂಬಾಟ್ ಮಶ್ರೂಮ್ ಫ್ರೈಡ್‌ರೈಸ್ ಮಾಡುವುದನ್ನು ನಾವು ತಿಳಿಸಿಕೊಡುತ್ತೇವೆ. ಹಾಗಿದ್ದರೆ ಇದನ್ನು ಹೇಗೆ ಮಾಡುವುದು ಎಂಬುದನ್ನು ತಿಳಿದುಕೊಳ್ಳೋಣ.

ಮಶ್ರೂಮ್ ಫ್ರೈಡ್‌ರೈಸ್ ಮಾಡಲು ಬೇಕಾಗುವ ಸಾಮಾಗ್ರಿಗಳು:
ಉಳಿದ ಅನ್ನ – 1 ಕಪ್
ತೊಳೆದು ಹೆಚ್ಚಿಟ್ಟುಕೊಂಡ ಅಣಬೆ – 150 ಗ್ರಾಂ
ಹೆಚ್ಚಿದ ಬೆಳ್ಳುಳ್ಳಿ – ಸ್ವಲ್ಪ
ಹೆಚ್ಚಿದ ಈರುಳ್ಳಿ – ಅರ್ಧ ಕಪ್
ಕೊತ್ತಂಬರಿ ಸೊಪ್ಪು – ಅರ್ಧ ಚಮಚ
ಆಲಿವ್ ಆಯಿಲ್- 2 ಚಮಚ
ಕರಿಮೆಣಸಿನ ಪುಡಿ – ಕಾಲು ಚಮಚ
ಉಪ್ಪು – ಅಗತ್ಯಕ್ಕೆ ತಕ್ಕಷ್ಟು

ಮಾಡುವ ವಿಧಾನ:
ಮೊದಲಿಗೆ ಒಂದು ಬಾಣಾಲೆಯಲ್ಲಿ ಆಲಿವ್ ಆಯಿಲ್ ಹಾಕಿಕೊಂಡು ಕಾದ ನಂತರ ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಹಾಕಿಕೊಂಡು 2 ನಿಮಿಷಗಳ ಕಾಲ ಚನ್ನಾಗಿ ಫ್ರೈ ಮಾಡಿಕೊಳ್ಳಿ.

ಬಳಿಕ ಇದಕ್ಕೆ ಹೆಚ್ಚಿದ ಅಣಬೆಗಳನ್ನು ಹಾಕಿಕೊಂಡು ಕಂದು ಬಣ್ಣ ಬರುವವರೆಗೆ ಚನ್ನಾಗಿ ಹುರಿದುಕೊಳ್ಳಿ. ಇದರ ನೀರಿನಾಂಶ ಸಂಪೂರ್ಣವಾಗಿ ಬಿಡುವುದರಿಂದ ಫ್ರೈಡ್‌ರೈಸ್ ಇನ್ನಷ್ಟು ರುಚಿಯನ್ನು ನೀಡುತ್ತದೆ.

ನಂತರ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿಕೊಂಡು ಸ್ವಲ್ಪ ಫ್ರೈ ಮಾಡಿ ನಂತರ ಅದಕ್ಕೆ ಕರಿಮೆಣಸಿನ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿಕೊಳ್ಳಿ.

ಬಳಿಕ ಈ ಮಿಶ್ರಣಕ್ಕೆ ಅನ್ನವನ್ನು ಹಾಕಿಕೊಂಡು 5ರಿಂದ 6 ನಿಮಿಷಗಳ ಕಾಲ ಚನ್ನಾಗಿ ಮಿಕ್ಸ್ ಮಾಡಿಕೊಳ್ಳಿ.
ಈಗ ಮಶ್ರೂಮ್ ಫ್ರೈಡ್‌ರೈಸ್ ತಿನ್ನಲು ರೆಡಿ. ಇದನ್ನು ಬಿಸಿ ಇರುವಾಗಲೇ ಸರ್ವ್ ಮಾಡಿ.

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago