ಬೆಳಗಿನ ಉಪಹಾರಕ್ಕೆ ಮನೆಗಳಲ್ಲಿ ಇಡ್ಲಿ ಮಾಡುವುದು ಮಾಮೂಲಿ. ಆದರೆ ಅದೇ ಇಡ್ಲಿಯನ್ನು ಬೇರೆ ಬೇರೆ ರೀತಿಯಾಗಿ ಮಾಡಿದರೆ, ಬದಲಾವಣೆ ಇರುತ್ತದೆ. ಹೀಗಾಗಿ ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವ ಸೌತೆಕಾಯಿಯಿಂದ ಏಕೆ ಇಡ್ಲಿ ತಯಾರಿಸಬಾರದು? ನೀವೇ ತಯಾರಿಸಿ ನೋಡಿ…
ಬೇಕಾಗುವ ಪದಾರ್ಥಗಳು: ಸೌತೆಕಾಯಿ-1(ಚಿಕ್ಕದು), ಅಕ್ಕಿ-2ಬಟ್ಟಲು, ಅವಲಕ್ಕಿ- ಸ್ವಲ್ಪ, ತೆಂಗಿನಕಾಯಿತುರಿ-ಅರ್ಧ ಬಟ್ಟಲು, ರವೆ- ಅರ್ಧ ಬಟ್ಟಲು, ಮೊಸರು- ಅರ್ಧಬಟ್ಟಲು, ಉಪ್ಪು- ರುಚಿಗೆ ತಕ್ಕಷ್ಟು, ಹಸಿಮೆಣಸಿನ ಕಾಯಿ- ಖಾರಕ್ಕೆ ತಕ್ಕಂತೆ
ಮಾಡುವುದು ಹೇಗೆ: ಮೊದಲಿಗೆ ಅಕ್ಕಿಯನ್ನು ಬಾಣಲೆಯಲ್ಲಿ ಸ್ವಲ್ಪ ಹುರಿದು ನೀರಿನಲ್ಲಿ ಸುಮಾರು 2ಗಂಟೆಗಳ ಕಾಲ ನೆನೆಸಿಡಬೇಕು. ಇನ್ನೊಂದೆಡೆ ಸೌತೆಕಾಯಿನ್ನು ಚಿಕ್ಕದಾಗಿ ಹಚ್ಚಿಟ್ಟುಕೊಳ್ಳಬೇಕು. ಮತ್ತೊಂದೆಡೆ ರವೆಯನ್ನು ತುಪ್ಪದಲ್ಲಿ ಹುರಿದಿಟ್ಟುಕೊಳ್ಳಬೇಕು. ಇಷ್ಟು ಮಾಡಿಕೊಂಡ ನಂತರ ಅಕ್ಕಿ, ಸೌತೆಕಾಯಿ, ತೆಂಗಿನ ತುರಿ, ಅವಲಕ್ಕಿ, ಉಪ್ಪು ಎಲ್ಲವನ್ನು ಹಾಕಿ ನೀರು ಹಾಕದೆ ರುಬ್ಬಬೇಕು.
ಹೀಗೆ ರುಬ್ಬುವ ಹಿಟ್ಟು ಸ್ವಲ್ಪ ಮಂದವಾಗಿವಂತೆ ನೋಡಿಕೊಳ್ಳಬೇಕು. ಬಳಿಕ ಅದಕ್ಕೆ ರವೆ ಮತ್ತು ಗಟ್ಟಿಮೊಸರು, ಕೊತ್ತಂಬರಿ ಸೊಪ್ಪು, ಹಸಿಮೆಣಸಿನಕಾಯಿ ಚೂರು ಸೇರಿಸಿ ಇಡ್ಲಿ ಪಾತ್ರೆಯಲ್ಲಿಟ್ಟು ಬೇಯಿಸಿದರೆ ಸೌತೆಕಾಯಿ ಇಡ್ಲಿ ರೆಡಿ ಆದಂತೆಯೇ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…