ಸುಲಭವಾಗಿ ಮಾಡಬಹುದಾದ ಬೆಂಡೆಕಾಯಿ ಚಟ್ನಿ ಇಲ್ಲಿದೆ

ಊಟದ ಜೊತೆಗೆ ನೆಂಚಿಕೊಳ್ಳಲು ಚಟ್ನಿಯೂ ಉಪ್ಪಿನಕಾಯಿಯೋ ಏನಾದರೂ ಬೇಕಾಗುತ್ತದೆ. ಮತ್ತೆ ಅದು ಬೇಗನೆ ತಯಾರಾಗುವಂತಿರಬೇಕು. ಹೆಚ್ಚು ಪದಾರ್ಥಗಳನ್ನು ಬಳಸದೆ ಸುಲಭವಾಗಿ ಬೆಂಡೆಕಾಯಿ ಚಟ್ನಿಯನ್ನು ಮಾಡಬಹುದು. ಬೆಂಡೆಕಾಯಿ ಚಟ್ನಿ ಮಾಡುವುದು ಹೇಗೆ ಎಂದು ನೋಡೋಣ.

ಬೇಕಾಗುವ ಪದಾರ್ಥಗಳು: 

  • ಬೆಂಡೆಕಾಯಿ-ಅರ್ಧ ಕೆಜಿ
  • ಹಸಿ ಮೆಣಸಿನಕಾಯಿ- 7-8
  • ಕೊತ್ತಂಬರಿ ಸೊಪ್ಪು- ಸ್ವಲ್ಪ
  • ಬೆಳ್ಳುಳ್ಳಿ-4-5 ಎಸಳು
  • ಹುಣಸೆಹಣ್ಣು- ಬೆಲ್ಲ ಗಾತ್ರದಷ್ಟು
  • ಜೀರಿಗೆ- 1 ಚಮಚ
  • ಸಾಸಿವೆ- ಕಾಲು ಚಮಚ
  • ಉಪ್ಪು- ರುಚಿಗೆ ತಕ್ಕಷ್ಟು

ಮಾಡುವ ವಿಧಾನ: ಮೊದಲಿಗೆ ಬೆಂಡೆಕಾಯಿಯನ್ನು ಚೆನ್ನಾಗಿ ತೊಳೆದು ನೀರು ಒಣಗಲು ಬಿಡಬೇಕು. ನಂತರ ಬೆಂಡೆಕಾಯಿಯನ್ನು ಪಲ್ಯಕ್ಕೆ ಹೆಚ್ಚಿಕೊಳ್ಳುವಂತೆ ಹೆಚ್ಚಿಕೊಂಡು, ಬಾಣಲಿಯಲ್ಲಿ 1 ಸ್ಪೂನ್ ಎಣ್ಣೆ ಹಾಕಿಕೊಂಡು ಲೋಳೆ ಹೋಗುವ ತನಕ ಚೆನ್ನಾಗಿ ಹುರಿಯಿರಿ,

ಅದೇ ಬಾಣಲಿಗೆ ಹಸಿ ಮೆಣಸಿನಕಾಯಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು, ಜೀರಿಗೆ ಹಾಕಿ ಸ್ವಲ್ಪ ಹೊತ್ತು ಬಾಡಿಸಿಕೊಂಡು, ಹುರಿದುಕೊಂಡ ಪದಾರ್ಥಗಳು ತಣ್ಣಗಾದ ಮೇಲೆ, ಹುಣಸೆಹಣ್ಣಿನೊಂದಿಗೆ ಮಿಕ್ಸಿ ಜಾರ್’ಗೆ ಹಾಕಿ ಚಟ್ನಿಯ ಹದಕ್ಕೆ ರುಬ್ಬಿಕೊಳ್ಳಿ. ರುಬ್ಬಿಕೊಂಡ ಮಿಶ್ರಣವನ್ನು ಮತ್ತೊಮ್ಮೆ ಬಾಣಲಿಗೆ ಹಾಕಿಕೊಳ್ಳಿ. ನಂತರ ಒಂದು ಪ್ಯಾನ್’ಗೆ 7-8 ಚಮಚ ಎಣ್ಣೆ ಹಾಕಿ ಸಾಸಿವೆ ಹಾಗೂ ಸ್ವಲ್ಪ ಜೀರಿಗೆ ಒಗ್ಗರಣೆ ಮಾಡಿಕೊಂಡು ರುಬ್ಬಿಕೊಂಡ ಮಿಶ್ರಣಕ್ಕೆ ಹಾಕಿ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ 5 ನಿಮಿಷ ಚೆನ್ನಾಗಿ ಬಾಡಿಸಿದರೆ, ರುಚಿಕರವಾದ ಬೆಂಡೆಕಾಯಿ ಚಟ್ನಿ ಸವಿಯಲು ಸಿದ್ಧ.

Ashika S

Recent Posts

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

24 seconds ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

18 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

36 mins ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

52 mins ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

1 hour ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

1 hour ago