ಹಬ್ಬ ಹರಿದಿನದಂತಹ ವಿಶೇಷ ಸಂದರ್ಭಗಳಲ್ಲಿ ಪಾಯಸ ಮಾಡೋದು ಸಾಮಾನ್ಯ. ಶಾವಿಗೆ ಪಾಯಸ, ಕಡಲೆ ಬೇಳೆ ಪಾಯಸ ಹೀಗೆ ನಾನಾ ಬಗೆಯ ಪಾಯಸ ಮಾಡುತ್ತಾರೆ. ಇಂದು ನಾವು ಖರ್ಜೂರ ಪಾಯಸ ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.
ಖರ್ಜೂರ ಪಾಯಸ ಮಾಡಲು ಮೊದಲಿಗೆ ಖರ್ಜೂರದ ಬೀಜ ತೆಗೆದು ಕತ್ತರಿಸಿ ಒಂದು ಪಾತ್ರೆಗೆ ಹಾಕಿ ಸ್ವಲ್ಪ ನೀರು ಸೇರಿಸಿ ಬೆಯಿಸಿಕೊಳ್ಳಿ. ನಂತರ ಇದನ್ನು ಒಂದು ಮಿಕ್ಸಿ ಜಾರಿಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಬೇಕು. ನಂತರ ಗ್ಯಾಸ್ ಮೇಲೆ ಒಂದು ಬಾಣಲೆ ಇಟ್ಟು ಅದಕ್ಕೆ ತುಪ್ಪ ಹಾಕಿ ನಂತರ ಗೋಡಂಬಿ ಚೂರು ಹಾಕಿ ಪ್ರೈ ಮಾಡಿ. ಹಾಗೇ ರವೆ ಕೂಡ ಸೇರಿಸಿ ಪರಿಮಳ ಬರುವವರೆಗೆ ಹುರಿಯಿರಿ. ಇದಕ್ಕೆ ಸ್ವಲ್ಪ ಬಿಸಿ ನೀರು ಹಾಕಿ ರವೆಯನ್ನು ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ರುಬ್ಬಿಟ್ಟುಕೊಂಡ ಖರ್ಜೂರದ ಮಿಶ್ರಣ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ನಂತರ ನಿಮ್ಮ ರುಚಿಗೆ ತಕ್ಕಷ್ಟು ಸಕ್ಕರೆ ಸೇರಿಸಿ. ಕೊನೆಗೆ ತೆಂಗಿನಕಾಯಿ ಹಾಲು ಹಾಕಿ ಸ್ವಲ್ಪ ಕುದಿ ಬರುವ ತನಕ ಹಾಗೇ ಇಟ್ಟು ನಂತರ ಮನೆಯವರೆಲ್ಲರ ಜೊತೆ ಕೂತು ಖರ್ಜೂರ ಪಾಯಸ ಸವಿಯಿರಿ.
ಪಿಹೆಚ್ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ.
ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಕುಟುಂಬವನ್ನು ನಿನ್ನೆ ಅಮಿತ್ ಶಾ ಅವರು ಭೇಟಿ ಮಾಡಿ ಸಾಂತ್ವಾನ ತಿಳಿಸಿದರು. ಅವರು…
ಸುಡೋ ಬಿಸಿಲಿಗೆ ಜನ ತತ್ತಿರಿಸಿ ಹೋಗಿದ್ದು, ಮನೆಯಿಂದ ಹೊರಗೆ ಕಾಲಿಡಲು ಹೆದರುವಂತಾಗಿದೆ. ಈ ಬಾರಿ ಪ್ರತಿವರ್ಷಕ್ಕಿಂತ ಹೆಚ್ಚಾಗಿ ಬಿಸಿಲಿದೆ. ಈ…
ಚಿನ್ನ ಮತ್ತು ಬೆಳ್ಳಿ ಬೆಲೆ ಅಸ್ವಾಭಾವಿಕವಾಗಿ ಏರಿಕೆ ಕಂಡಿದ್ದು, ಇದೀಗ ಕೊಂಚ ಇಳಿಕೆಯಾಗಿದೆ. ಇಂದು ಗುರುವಾರ ಚಿನ್ನದ ಬೆಲೆ ಗ್ರಾಮ್ಗೆ…
ವಿವಾದಾತ್ಮಕ ಹೇಳಿಕೆ ಹಿನ್ನಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆಗೆ ಚುನಾವಣಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನಿನ್ನೆ(ಏ.30) ಪ್ರಿಯಾಂಕಾ ಜಾರಕಿಹೊಳಿ…