ಈರುಳ್ಳಿ ಪಕೋಡ (ನೀರುಳ್ಳಿ ಬಜೆ) ಮಾಡುವ ವಿಧಾನ

ಬಿಸಿ ಬಿಸಿ ನೀರುಳ್ಳಿ ಬಜೆ(ಈರುಳ್ಳಿ ಪಕೋಡ )ವನ್ನು ಮಾಡಿ ತಿನ್ನಲು ಇಲ್ಲಿದೆ ಸುಲಭ ವಿಧಾನ.  ಈರುಳ್ಳಿ, ಕಡ್ಲೆ ಹಿಟ್ಟು, ಅಕ್ಕಿ ಹಿಟ್ಟು, ಅಚ್ಚಖಾರದ ಪುಡಿ, ಓಮದ ಕಾಳು, ಇಂಗು, ಸಣ್ಣಗೆ ಹೆಚ್ಚಿದ ಹಸಿರುಮೆಣಸಿನಕಾಯಿ ಮತ್ತು ಕರಿಬೇವನ್ನು ಹಾಕಿ ಮಾಡಲಾಗುತ್ತದೆ.

ಬೇಕಾಗುವ ಪದಾರ್ಥಗಳು: 5 – 6 ದೊಡ್ಡ ಈರುಳ್ಳಿ, 3 ಕಪ್ ಕಡ್ಲೆ ಹಿಟ್ಟು, 1/2 ಕಪ್ ಅಕ್ಕಿ ಹಿಟ್ಟು,1 ಟೀಸ್ಪೂನ್ ಅಚ್ಚ ಖಾರದ ಪುಡಿ, 1 – 2 ಸಣ್ಣದಾಗಿ ಹೆಚ್ಚಿದ ಹಸಿಮೆಣಸಿನಕಾಯಿ, 2 ಟೇಬಲ್ ಚಮಚ ಹೆಚ್ಚಿದ ಕರಿಬೇವು, 1/4 ಟೀಸ್ಪೂನ್ ಇಂಗು, 1/2 ಟೀಸ್ಪೂನ್ ಓಮ ಅಥವಾ ಅಜ್ವೈನ್, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಖಾಯಿಸಲು.

ನೀರುಳ್ಳಿ ಬಜೆ ಮಾಡುವ ವಿಧಾನ:
ಈರುಳ್ಳಿ ಉದ್ದನಾಗಿ ತೆಳುವಾಗಿ ಕತ್ತರಿಸಿಕೊಳ್ಳಿ. ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ. 5 ನಿಮಿಷ ಹಾಗೆ ಬಿಡಿ. ಹೀಗೆ ಮಾಡುವುದರಿಂದ ಈರುಳ್ಳಿ ನೀರು ಬಿಡುತ್ತದೆ. ಈಗ ಕಡಲೆಹಿಟ್ಟು, ಅಕ್ಕಿ ಹಿಟ್ಟು, ಮೆಣಸಿನ ಪುಡಿ, ಕತ್ತರಿಸಿದ ಹಸಿರು ಮೆಣಸಿನಕಾಯಿ , ಕತ್ತರಿಸಿದ ಕರಿಬೇವಿನ ಸೊಪ್ಪು, ಓಮ ಮತ್ತು ಇಂಗು ಸೇರಿಸಿ ಚೆನ್ನಾಗಿ ಕಲಸಿ. ನೀರು ಹಾಕಬೇಡಿ.
2 ಚಮಚ ಬಿಸಿ ಎಣ್ಣೆ ಸೇರಿಸಿ ಮತ್ತೆ ಚೆನ್ನಾಗಿ ಕಲಸಿ.

ಒಂದು ಬಾಣಲೆ ತೆಗೆದುಕೊಂಡು ಎಣ್ಣೆ ಬಿಸಿಯಾಗಲು ಇಡಿ. ಎಣ್ಣೆ ಬಿಸಿಯಾದ ಕೂಡಲೇ ಒಂದು ಕೈ ಹಿಡಿಯಷ್ಟು ಹಿಟ್ಟು ತೆಗೆದುಕೊಂಡು ಸ್ವಲ್ಪ ಸ್ವಲ್ಪವಾಗಿ ಎಣ್ಣೆಗೆ ಹಾಕಿ. ಬಜ್ಜಿಯನ್ನು ಸವಿಯಿರಿ.

Gayathri SG

Recent Posts

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

14 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

32 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

46 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago