ಆಲೂಗಡ್ಡೆ ಫ್ರೈ ಎಳೆಯ ಆಲೂಗಡ್ಡೆಯ ಮಸಾಲೆಯುಕ್ತ ರೋಸ್ಟ್ ಆಗಿದೆ. ಮನೆಯಲ್ಲಿ ಸುಲಭವಾಗಿ ತಯಾರು ಮಾಡಬಹುದು. ಇದನ್ನು ಹೇಗೆ ಮಾಡುವುದು ಎಂದು ತಿಳಿದು ಕೊಳ್ಳೋಣ.
ಬೇಕಾಗುವ ಪದಾರ್ಥಗಳು:
ಉದ್ದಿನ ಬೇಳೆ – ಎರಡೂವರೆ ಟೀಸ್ಪೂನ್
ಒಣ ಕೆಂಪು ಮೆಣಸಿನಕಾಯಿ – 5
ಕರಿಮೆಣಸು – 1 ಟೀಸ್ಪೂನ್
ಕಡಲೆ ಬೇಳೆ – ಅರ್ಧ ಟೀಸ್ಪೂನ್
ಜೀರಿಗೆ – ಕಾಲು ಟೀಸ್ಪೂನ್
ಸಾಸಿವೆ – ಕಾಲು ಟೀಸ್ಪೂನ್
ಹಿಂಗ್ – ಕಾಲು ಟೀಸ್ಪೂನ್
ಸಣ್ಣಗೆ ಕೊಚ್ಚಿದ ಈರುಳ್ಳಿ – 2
ಕರಿಬೇವಿನ ಎಲೆ – 2 ಕಡ್ಡಿ
ಬೇಯಿಸಿದ ಎಳೆಯ ಆಲೂಗಡ್ಡೆ – 15 ರಿಂದ 20
ಉಪ್ಪು – ರುಚಿಗೆ ತಕ್ಕಷ್ಟು
ಮಾಡುವ ವಿಧಾನ: ಮೊದಲಿಗೆ ಬಾಣಲೆಯಲ್ಲಿ 2 ಟೀಸ್ಪೂನ್ ಉದ್ದಿನ ಬೇಳೆ, ಒಣ ಕೆಂಪು ಮೆಣಸಿನಕಾಯಿ, ಕರಿಮೆಣಸನ್ನು ಹಾಕಿ ಹುರಿದುಕೊಳ್ಳಿ. ಬಳಿಕ ಅದನ್ನು ತಣ್ಣಗಾಗಿಸಿ, ಮಿಕ್ಸರ್ ಜಾರ್ಗೆ ಹಾಕಿ ಪುಡಿಮಾಡಿಕೊಳ್ಳಿ. ಇದೀಗ ಮಸಾಲಾ ಪುಡಿ ತಯಾರಾಗಿದೆ.
ಈಗ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಅದಕ್ಕೆ ಕಡಲೆ ಬೇಳೆ, ಉಳಿದ ಅರ್ಧ ಟೀಸ್ಪೂನ್ ಉದ್ದಿನ ಬೇಳೆ, ಜೀರಿಗೆ, ಸಾಸಿವೆ ಹಾಗೂ ಹಿಂಗ್ ಹಾಕಿ ಸಿಡಿಸಿ. ಬಳಿಕ ಈರುಳ್ಳಿ ಹಾಕಿ ಮೃದುವಾಗುವವರೆಗೆ ಹುರಿದುಕೊಳ್ಳಿ. ನಂತರ ಕರಿಬೇವಿನ ಸೊಪ್ಪು ಸೇರಿಸಿ. ಈಗ ಬೇಯಿಸಿದ ಎಳೆಯ ಆಲೂಗಡ್ಡೆಯನ್ನು ಹಾಕಿ ಮಿಶ್ರಣ ಮಾಡಿ. ಪುಡಿ ಮಾಡಿದ ಮಸಾಲೆ ಹಾಗೂ ಉಪ್ಪು ಸೇರಿಸಿ, ಮಿಶ್ರಣ ಮಾಡಿ, ಕೆಲ ನಿಮಿಷ ಬೇಯಿಸಿಕೊಂಡರೆ ಆಲೂಗಡ್ಡೆ ಫ್ರೈ ಸವಿಯಲು ಸಿದ್ಧ.
ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…
ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್ನೊಂದಿಗೆ ಬಂದಿದೆ.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…