ಅಡುಗೆ ಮನೆ

ಆಲೂಗಡ್ಡೆ ಫ್ರೈ ಸುಲಭವಾಗಿ ಮಾಡುವುದು ಹೇಗೆ ?

ಆಲೂಗಡ್ಡೆ ಫ್ರೈ ಎಳೆಯ ಆಲೂಗಡ್ಡೆಯ ಮಸಾಲೆಯುಕ್ತ ರೋಸ್ಟ್ ಆಗಿದೆ. ಮನೆಯಲ್ಲಿ ಸುಲಭವಾಗಿ ತಯಾರು ಮಾಡಬಹುದು. ಇದನ್ನು ಹೇಗೆ ಮಾಡುವುದು ಎಂದು ತಿಳಿದು ಕೊಳ್ಳೋಣ.

ಬೇಕಾಗುವ ಪದಾರ್ಥಗಳು:
ಉದ್ದಿನ ಬೇಳೆ – ಎರಡೂವರೆ ಟೀಸ್ಪೂನ್
ಒಣ ಕೆಂಪು ಮೆಣಸಿನಕಾಯಿ – 5
ಕರಿಮೆಣಸು – 1 ಟೀಸ್ಪೂನ್
ಕಡಲೆ ಬೇಳೆ – ಅರ್ಧ ಟೀಸ್ಪೂನ್
ಜೀರಿಗೆ – ಕಾಲು ಟೀಸ್ಪೂನ್
ಸಾಸಿವೆ – ಕಾಲು ಟೀಸ್ಪೂನ್
ಹಿಂಗ್ – ಕಾಲು ಟೀಸ್ಪೂನ್
ಸಣ್ಣಗೆ ಕೊಚ್ಚಿದ ಈರುಳ್ಳಿ – 2
ಕರಿಬೇವಿನ ಎಲೆ – 2 ಕಡ್ಡಿ
ಬೇಯಿಸಿದ ಎಳೆಯ ಆಲೂಗಡ್ಡೆ – 15 ರಿಂದ 20
ಉಪ್ಪು – ರುಚಿಗೆ ತಕ್ಕಷ್ಟು

ಮಾಡುವ ವಿಧಾನ: ಮೊದಲಿಗೆ ಬಾಣಲೆಯಲ್ಲಿ 2 ಟೀಸ್ಪೂನ್ ಉದ್ದಿನ ಬೇಳೆ, ಒಣ ಕೆಂಪು ಮೆಣಸಿನಕಾಯಿ, ಕರಿಮೆಣಸನ್ನು ಹಾಕಿ ಹುರಿದುಕೊಳ್ಳಿ. ಬಳಿಕ ಅದನ್ನು ತಣ್ಣಗಾಗಿಸಿ, ಮಿಕ್ಸರ್ ಜಾರ್‌ಗೆ ಹಾಕಿ ಪುಡಿಮಾಡಿಕೊಳ್ಳಿ. ಇದೀಗ  ಮಸಾಲಾ ಪುಡಿ ತಯಾರಾಗಿದೆ.

ಈಗ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಅದಕ್ಕೆ ಕಡಲೆ ಬೇಳೆ, ಉಳಿದ ಅರ್ಧ ಟೀಸ್ಪೂನ್ ಉದ್ದಿನ ಬೇಳೆ, ಜೀರಿಗೆ, ಸಾಸಿವೆ ಹಾಗೂ ಹಿಂಗ್ ಹಾಕಿ ಸಿಡಿಸಿ. ಬಳಿಕ ಈರುಳ್ಳಿ ಹಾಕಿ ಮೃದುವಾಗುವವರೆಗೆ ಹುರಿದುಕೊಳ್ಳಿ. ನಂತರ ಕರಿಬೇವಿನ ಸೊಪ್ಪು ಸೇರಿಸಿ. ಈಗ ಬೇಯಿಸಿದ ಎಳೆಯ ಆಲೂಗಡ್ಡೆಯನ್ನು ಹಾಕಿ ಮಿಶ್ರಣ ಮಾಡಿ. ಪುಡಿ ಮಾಡಿದ ಮಸಾಲೆ ಹಾಗೂ ಉಪ್ಪು ಸೇರಿಸಿ, ಮಿಶ್ರಣ ಮಾಡಿ, ಕೆಲ ನಿಮಿಷ ಬೇಯಿಸಿಕೊಂಡರೆ ಆಲೂಗಡ್ಡೆ ಫ್ರೈ ಸವಿಯಲು ಸಿದ್ಧ.

Ashika S

Recent Posts

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

2 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

7 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

15 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

32 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

33 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

44 mins ago