ಬೇಸಿಗೆಯಲ್ಲಿ ನಾಲಿಗೆಗೆ ಒಂದಿಷ್ಟು ರುಚಿ, ದೇಹಕ್ಕೆ ಮತ್ತೊಂದಷ್ಟು ತಂಪು ನೀಡಬಹುದಾದ ಜೀರಾ ರೈಸ್ನ್ನು ಪಟಾಪಟ್ ಆಗಿ ಮಾಡುವುದು ಹೇಗೆ ಎಂಬುದನ್ನು ಬನ್ನಿ ನೋಡೋಣ.
ಬೇಕಾಗುವ ಪದಾರ್ಥಗಳು: ಬಾಸಮತಿ ಅಕ್ಕಿ- ಒಂದು ಕಪ್, ಜೀರಿಗೆ- ಎರಡು ಚಮಚ, ಕೊತ್ತಂಬರಿ ಸೊಪ್ಪು- ಸ್ವಲ್ಪ, ಕರಿಬೇವು- ಸ್ವಲ್ಪ, ತುಪ್ಪ- ಮೂರು ಚಮಚ, ಈರುಳ್ಳಿ-ಎರಡು ಶುಂಠಿ, ಬೆಳ್ಳುಳ್ಳಿ ಪೇಸ್ಟ್- ಒಂದು ಚಮಚ, ಹಸಿಮೆಣಸು-ನಾಲ್ಕು, ಉಪ್ಪು- ರುಚಿಗೆ ತಕ್ಕಂತೆ, ಗೋಡಂಬಿ-ಹತ್ತು.
ಮಾಡುವುದು ಹೇಗೆ?: ಒಂದೆಡೆ ಈರುಳ್ಳಿ, ಮೆಣಸಿನಕಾಯಿ ಹಚ್ಚಿಟ್ಟುಕೊಳ್ಳಬೇಕು. ಇನ್ನೊಂದೆಡೆ ಕೊತ್ತಂಬರಿ ಸೊಪ್ಪನ್ನು ಹಚ್ಚಿಟ್ಟುಕೊಳ್ಳಬೇಕು. ಇದಾದ ನಂತರ ಅಕ್ಕಿಯನ್ನು ತೊಳೆದು ಒಂದು ಕಪ್ ಅಕ್ಕಿಗೆ ಎರಡು ಕಪ್ ನೀರು ಹಾಕಿ ಸ್ವಲ್ಪ ಉಪ್ಪು ಹಾಕಿ ಕುಕ್ಕರ್ನಲ್ಲಿ ಬೇಯಲು ಇಡಬೇಕು. ಅನ್ನವಾದ ಬಳಿಕ ಅದನ್ನು ತೆಗೆದಿರಿಸಿಕೊಳ್ಳಬೇಕು. ಆ ನಂತರ ಒಂದು ಪಾತ್ರೆಯನ್ನು ಒಲೆಯ ಮೇಲಿಟ್ಟು ಅದಕ್ಕೆ ತುಪ್ಪ ಹಾಕಬೇಕು. ತುಪ್ಪ ಕಾದ ಬಳಿಕ ಅದಕ್ಕೆ ಜೀರಿಗೆ ಹಾಕಬೇಕು ಅದು ಸಿಡಿದ ಬಳಿಕ ಈರುಳ್ಳಿ ಹಾಕಿ ಚೆನ್ನಾಗಿ ಹುರಿಯಬೇಕು. ಅದು ಬೆಂದು ಕಂದು ಬಣ್ಣ ಬರುತ್ತಿದ್ದಂತೆಯೇ ಕರಿಬೇವು ಸೊಪ್ಪು, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಮೆಣಸಿನ ಕಾಯಿ, ಗೋಡಂಬಿ ಹಾಕಿಕೊಂಡು ಚೆನ್ನಾಗಿ ಹುರಿಯಬೇಕು. ಆ ನಂತರ ನಿಧಾನ ಉರಿ ಮಾಡಿಕೊಂಡು ಅದಕ್ಕೆ ಮಾಡಿಟ್ಟ ಅನ್ನವನ್ನು ಹಾಕಿ ಚೆನ್ನಾಗಿ ಕಲೆಸಬೇಕು. ಬಳಿಕ ಒಲೆಯಿಂದ ಇಳಿಸಿ ಅದರ ಮೇಲೆ ಕೊತ್ತಂಬರಿ ಸೊಪ್ಪನ್ನು ಉದುರಿಸಿದರೆ ಜೀರಾ ರೈಸ್ ಸವಿಯಲು ಸಿದ್ದವಾದಂತೆಯೇ…
ಯುನೈಟೆಡ್ ಸ್ಟೇಟ್ಸ್ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…
ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್ನಲ್ಲಿ ನಡೆದಿದೆ.…
ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು. ಮಂಗಳೂರಿನ ಹೊರವಲಯದ ಕಿನ್ನಿಗೋಳಿ…
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ…
ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬಬೀದರ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್ನ ಓಲ್ಡ್ ಸಿಟಿಯ…
ಕೊರೊನಾ ವ್ಯಾಕ್ಸಿನ್ ಮತ್ತು ಕೋವಶೀಲ್ಡ್ ಪಡೆದವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಮಾತಿಗೆ ಧಂಗಾಗಿರುವ ಜನರಿಗೆ ಇದೀಗ ಕೊರೊನಾ ವ್ಯಾಕ್ಸಿನ್ ಹಿಂಪಡೆದ…