ಪಾಲಕ್ ಪನ್ನೀರ್ ಎಲ್ಲರೂ ಇಷ್ಟಪಡುವ ಮತ್ತು ರೋಟಿ ಜತೆಗೆ ತುಂಬಾ ಇಷ್ಟವಾಗುವ ಪದಾರ್ಥವಾಗಿದೆ. ಇದನ್ನು ಮನೆಯಲ್ಲಿ ಮಾಡಿ ಸೇವಿಸಿದರೆ ಇನ್ನು ಚೆನ್ನಾಗಿರುತ್ತದೆ. ಹಾಗಾದರೆ ಹೇಗೆ ಮಾಡೋದು? ಎಂಬುದರ ಬಗ್ಗೆ ಇಲ್ಲಿದೆ.
ಬೇಕಾಗುವ ಪದಾರ್ಥಗಳು: ಪಾಲಕ್ ಸೊಪ್ಪು- 4ಕಟ್ಟು, ಈರುಳ್ಳಿ-2, ಟೋಮೆಟೋ-2, ಶುಂಠಿ ಬೆಳ್ಳುಳ್ಳಿ ಪೇಸ್ಟ್- ಅರ್ಧ ಚಮಚ, ಜೀರಿಗೆ- ಕಾಲು ಚಮಚ, ಹಸಿಮೆಣಸು-4, ಪನ್ನೀರ್ ತುಂಡುಗಳು- 1ಕಪ್, ಅರಶಿನಪುಡಿ- ಚಿಟಿಕೆ, ಗರಂಮಸಾಲೆ-2ಚಮಚ, ಹಾಲಿನಕೆನೆ-ಕಾಲು ಕಪ್, ಉಪ್ಪು- ರುಚಿಗೆ ತಕ್ಕಷ್ಟು, ಎಣ್ಣೆ- 8ಚಮಚ
ಮಾಡುವುದು ಹೀಗೆ: ಮೊದಲಿಗೆ ಪಾಲಕ್ ಸೊಪ್ಪನ್ನು ಚೆನ್ನಾಗಿ ಬೇಯಿಸಿ ಮಿಕ್ಸಿಗೆ ಹಾಕಿ ರುಬ್ಬಿ ಪೇಸ್ಟ್ ಮಾಡಿಟ್ಟುಕೊಳ್ಳಬೇಕು. ಇನ್ನೊಂದೆಡೆ ಪನ್ನೀರನ್ನು ಕರಿದಿಟ್ಟು ಕೊಳ್ಳಬೇಕು. ಮತ್ತೊಂದೆಡೆ ಬಾಣಲೆಯಲ್ಲಿ ಎಣ್ಣೆ ಹಾಕಿ ಬಿಸಿಯಾಗುತ್ತಿದ್ದಂತೆಯೇ ಅದಕ್ಕೆ ಜೀರಿಗೆ ಅರಶಿನ ಹಾಕಿ ನಂತರ ಹೆಚ್ಚಿದ ಈರುಳ್ಳಿ ಸೇರಿಸಿ ಹುರಿಯಬೇಕು.
ಆ ನಂತರ ಟೋಮೆಟೋ, ಬೆಳ್ಳುಳ್ಳಿ ಶುಂಠಿ ಪೇಸ್ಟ್ ಹಾಕಿ ಸ್ವಲ್ಪ ಹುರಿಯಿರಿ. ಬಳಿಕ ಅದಕ್ಕೆ ರುಬ್ಬಿಟ್ಟುಕೊಂಡ ಪಾಲಕ್ನ್ನು ಸೇರಿಸಿ ಗರಂಮಸಾಲೆ, ಉಪ್ಪು( ರುಚಿಗೆ ತಕ್ಕಂತೆ) ಹಾಕಿ ಚೆನ್ನಾಗಿ ಕುದಿಸಿ. ಕೊನೆಯಲ್ಲಿ ಹಾಲುಕೆನೆ ಸೇರಿಸಿ ಇದಾದ ಬಳಿಕ ಕರಿದಿಟ್ಟುಕೊಂಡ ಪನ್ನೀರ್ ಸೇರಿಸಿ. ಚೆನ್ನಾಗಿ ಕುದಿದ ಬಳಿಕ ಇಳಿಸಿದರೆ ಪನ್ನೀರ್ ಸಿದ್ಧವಾದಂತೆಯೇ.
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…