ಅಡುಗೆ ಮನೆ

ಚಿತ್ರಾನ್ನ ಸೇವಿಸಿ ಬೋರಾಗಿದ್ದರೇ ಈ ಮಾವಿನ ಕಾಯಿ ಚಿತ್ರಾನ್ನ ಮಾಡಿ ನೋಡಿ

ಚಿತ್ರಾನ್ನ ಸೇವಿಸಿ ಬೋರಾಗಿದ್ದರೂ ಹೆಚ್ಚಿನವರು ಕೆಲವೊಂದು ಕಾರಣಗಳಿಗೆ ಬೆಳಗ್ಗಿನ ತಿಂಡಿಗೆ ಚಿತ್ರಾನ್ನವನ್ನು ಮಾಡುತ್ತಲೇ ಇರುತ್ತಾರೆ. ಆದರೆ ಸೀಸನ್ ಗೆ ತಕ್ಕಂತೆ ಚಿತ್ರಾನ್ನಕ್ಕೂ ಹೊಸತನ ನೀಡಿದರೆ ಬೋರ್ ಹೊಡೆಸುವುದಿಲ್ಲ. ಈ ಮಾವಿನ ಕಾಲವಾಗಿರುವುದರಿಂದ ಮಾವಿನಕಾಯಿ ಚಿತ್ರಾನ್ನ ಮಾಡಿ ಜಾಣರಾಗಿ.

ಬೇಕಾಗುವ ಪದಾರ್ಥಗಳು: ಮಾವಿನಕಾಯಿತುರಿ- ಒಂದು ಕಪ್, ತೆಂಗಿನಕಾಯಿತುರಿ- ಅರ್ಧ ಹೋಳು, ಒಣಮೆಣಸಿನಕಾಯಿ- ನಾಲ್ಕು, ಇಂಗು- ಸ್ವಲ್ಪ, ಸಾಸಿವೆ- ಸ್ವಲ್ಪ, ಅರಿಶಿನಪುಡಿ-ಚಿಟಿಕೆ, ಕೊತ್ತಂಬರಿ ಸೊಪ್ಪು- ಸ್ವಲ್ಪ, ಕರಿಬೇವು-ಸ್ವಲ್ಪ, ರುಚಿಗೆ ತಕ್ಕಂತೆ ಉಪ್ಪು.

ಮಾಡುವ ವಿಧಾನ: ಚಿತ್ರಾನ್ನ ಮಾಡಲು ಹೊರಡುವವರು ಮಾವಿನತುರಿ ಸೇರಿದಂತೆ ಮಸಾಲೆ ಪದಾರ್ಥಗಳನ್ನು ಮಿಕ್ಸಿಯಲ್ಲಿ (ನೀರು ಹಾಕದೆ) ಹಾಕಿ ರುಬ್ಬಬೇಕು. ಮತ್ತೊಂದೆಡೆ ಪಾತ್ರೆಯಲ್ಲಿ ಒಗ್ಗರಣೆಗೆ ಎಣ್ಣೆ ಹಾಕಿ ಅದು ಕಾಯುತ್ತಿದ್ದಂತೆಯೇ ಸಾಸಿವೆ ಹಾಕಿ ಅದು ಸಿಡಿದ ಬಳಿಕ ಕಡ್ಲೆಬೀಜ, ಕಡ್ಲೆಬೇಳೆ, ಉದ್ದಿನ ಬೇಳೆ ಒಣ ಮೆಣಸು ಹಾಕಿ ಚೆನ್ನಾಗಿ ಹುರಿಯಬೇಕು. ನಂತರ ರುಬ್ಬಿಟ್ಟುಕೊಂಡ ಮಾವಿನ ತುರಿಯ ಮಸಾಲೆಯನ್ನು ಹಾಕಿ ಮಿಶ್ರಮಾಡಬೇಕು. ಈ ಸಂದರ್ಭ ರುಚಿಗೆ ತಕ್ಕಂತೆ ಉಪ್ಪು ಹಾಕಬೇಕು. ಆ ನಂತರ ಇಳಿಸಿ ಅದಕ್ಕೆ ಅನ್ನವನ್ನು ಹಾಕಿ ಕಲೆಸಿದರೆ ಮಾವಿನಕಾಯಿ ಚಿತ್ರಾನ್ನ ತಯಾರು ಆಗುತ್ತದೆ.

Gayathri SG

Recent Posts

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

5 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

6 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

17 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

18 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

37 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

47 mins ago