ಬೇಸಿಗೆ ಕಾಲದ ತಂಪು ಪಾನೀಯ ಮಾವಿನ ಹಣ್ಣಿನ ಲಸ್ಸಿ

ಮಾವಿನ ಹಣ್ಣಿನ ಲಸ್ಸಿ ಬೇಸಿಗೆಯ ಅತ್ಯುತ್ತಮ ಪಾನೀಯಗಳಲ್ಲಿ ಒಂದು. ಇದು ಪ್ರಪಂಚದಾದ್ಯಂತದ ಎಲ್ಲಾ ತಲೆಮಾರಿನ ಜನರಿಗೆ  ಆರೋಗ್ಯಕರ ಹಣ್ಣಿನ ಪಾನೀಯವಾಗಿದೆ. ಅತ್ಯಂತ ಸುಲಭವಾಗಿ ಮಾಡುವ ಹಲಸಿನ ಹಣ್ಣಿನ ಲಸ್ಸಿ ಇಲ್ಲಿದೆ.

ಬೇಕಾಗುವ ಸಾಮಾಗ್ರಿಗಳು:
1 ಕಪ್ ಕತ್ತರಿಸಿದ ಮಾವು
1  ಸಿಹಿ ಕಪ್ ಮೊಸರು
1/4 ಕಪ್ ನೀರು ಅಥವಾ ಹಾಲು
ಒಂದು ಚಿಟಿಕೆ ಏಲಕ್ಕಿ ಪುಡಿ
1 1/2 ಟೇಬಲ್ ಚಮಚಗಳು ಸಕ್ಕರೆ
ಅಲಂಕಾರಕ್ಕಾಗಿ  ಕತ್ತರಿಸಿದ ಮಿಶ್ರ ಡ್ರೈ ಫ್ರೂಟ್ಸ್

ಮಾಡುವ ವಿಧಾನ:

ಮಾವಿನ ಹಣ್ಣಿನ ಸಿಪ್ಪೆ ಸುಲಿದು,ಸಣ್ಣ ತುಂಡುಗಳಾಗಿ ಕತ್ತರಿಸಿ ಮಿಕ್ಸಿ ಜಾರ್ ನಲ್ಲಿ ಹಾಕಿ ಅದಕ್ಕೆ ಸಿಹಿ ಮೊಸರು, ಹಾಲು, ಸಕ್ಕರೆ ಹಾಗೂ ಒಂದು ಚಿಟಿಕೆ ಏಲಕ್ಕಿ ಪುಡಿಯನ್ನು ಸೇರಿಸಿ ನಯವಾಗಿ ರುಬ್ಬಿಕೊಳ್ಳಿ. ನಂತರ  ಅದರ ದಪ್ಪವನ್ನು ಪರಿಶೀಲಿಸಿ ಮತ್ತು ಅಗತ್ಯವಿದ್ದರೆ ನೀರನ್ನು ಸೇರಿಸಿಕೊಂಡು ಮತ್ತೊಮ್ಮೆ ಮಿಕ್ಸಿ ಜಾರ್ ನಲ್ಲಿ ತಿರುವಿಕೊಳ್ಳಿ. ನಂತರ ಒಂದು ಸರ್ವಿಂಗ್ ಬೌಲ್ ಗೆ ಹಾಕಿ ಅದರ ಮೇಲೆ ಕತ್ತರಿಸಿದ ಡ್ರೈ ಫ್ರೂಟ್ಸ್ ಗಳನ್ನು ಹಾಕಿ ಒಂದು ಗಂಟೆಗಳ ಕಾಲ ಫ್ರಿಡ್ಜ್ ನಲ್ಲಿ ಇಟ್ಟರೆ ಬೇಸಿಗೆಕಾಲದ ರುಚಿ ರುಚಿಯಾದ ಮಾವಿನಹಣ್ಣಿನ ಲಸ್ಸಿ ಸವಿಯಲು ಸಿದ್ಧ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

10 hours ago