ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಹುಚ್ಚು ನಾಯಿಗಳ ಹಾವಳಿ ಹೆಚ್ಚಾಗಿದ್ದು ಅಲ್ಲಲ್ಲಿ ನಾಯಿಗಳು ಜನರ ಮೇಲೆ ದಾಳಿನಡೆಸುತ್ತಿವೆ. ಕುಷ್ಟಗಿ ಪಟ್ಟಣದ ಗಜೇಂದ್ರಗಡ ರಸ್ತೆಯ ಮುದ್ದಾನೇಶ್ವರ ಮಠದಲ್ಲಿ ಹುಚ್ಚು ನಾಯಿ ಕಡಿದು ಬಾಲಕ ಸೇರಿದಂತೆ 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳುಗಳನ್ನು ಕುಷ್ಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಷ್ಟಗಿಯಲ್ಲಿ ನಾಯಿ ಹಾವಳಿ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.
ಘಟನೆ ನಂತರ ಸಾರ್ವಜನಿಕರು ನಾಯಿಯನ್ನು ಹಿಡಿದು ಕೊಂದಿದ್ದಾರೆ.
ಕುಷ್ಟಗಿ ಪಟ್ಟಣದ ಗೌಡರುಣಿ, ಇಂದಿರಾ ನಗರ, ಭೋವಿ ಓಣಿ, ಚೆಲುವಾದಿ ಓಣಿ ಸೇರಿದಂತೆ ಬಹುತೇಕ ಏರಿಯಾಗಳಲ್ಲಿನ ಜನರಿಗೆ ಹುಚ್ಚು ನಾಯಿ ಕಚ್ಚಿದೆ. ಇಷ್ಟೆಲ್ಲಾ ಅನಾಹುತ ಸಂಭವಿಸಿದರೂ ಸಹ ಪುರಸಭೆಯ ಅಧಿಕಾರಿಗಳು ಯಾವುದೆ ಕ್ರಮ ಕೈಗೊಂಡಿಲ್ಲವೆಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.