ಕಲಬುರಗಿ: ತಾಲೂಕು ಚಿತ್ತಾಪುರದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಟ್ಯಾಂಕರ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ 6 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಾ ಬಳಿ ಗುರುವಾರ ಸಂಜೆ ಸಂಭವಿಸಿದೆ.
ಮೃತಪಟ್ಟವರೆಲ್ಲೂ ನಾಲವಾರ ಗ್ರಾಮದ ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು ನಾಸ್ಮೀನ್ ಬೇಗಂ, ಬಿ.ಬಿ.ಫಾತಿಮಾ, ಅಬೂಬಕರ್, ಮರಿಯಮ್, ಮೊಹಮ್ಮದ್ ಪಾಷಾ, ಆಟೋ ಚಾಲಕ ಬಾಬಾ ಎಂದು ಗುರುತಿಸಲಾಗಿದೆ.
ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿಸಲು ತೆರಳುವಾಗ ದುರಂತ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.