News Karnataka Kannada
Monday, April 29 2024
ಕ್ರೈಮ್

ನೇಪಾಳದಲ್ಲಿ ನದಿಗುರುಳಿದ ಬಸ್‌: 7 ಮಂದಿ ಯಾತ್ರಿಕರು ಸಾವು

ಕ್ಯಾಂಟರ್ ವಾಹನವೊಂದು ಪಲ್ಟಿಯಾಗಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಬುಧವಾರ ನಡೆದಿದೆ. 
Photo Credit : IANS

ಕಠ್ಮಂಡು: ನೇಪಾಳದಲ್ಲಿ ಗುರುವಾರ ನಸುಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಭಾರತೀಯ ಯಾತ್ರಿಗಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಠ್ಮಂಡುವಿನಿಂದ ಜನಕ್‌ಪುರ್ ಕಡೆಗೆ ತೆರಳುತ್ತಿದ್ದ ಬಸ್ ಚುರಿಯಮೈ ದೇವಸ್ಥಾನದ ದಕ್ಷಿಣದಲ್ಲಿರುವ ನದಿಯ ದಡದಲ್ಲಿ ಮಧ್ಯರಾತ್ರಿ 2 ಗಂಟೆಗೆ ಪಲ್ಟಿಯಾಗಿ ಸುಮಾರು 50 ಮೀಟರ್ ಕೆಳಗೆ ಬಿದ್ದಿದೆ. ಮೃತರ ಪೈಕಿ ಓರ್ವ ನೇಪಾಳದವರಾಗಿದ್ದು, ರಾಜಸ್ಥಾನದ ಆರು ಭಾರತೀಯ ಪ್ರಜೆಗಳು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಕಚೇರಿಯ ಉಪ ಅಧೀಕ್ಷಕ ಪ್ರದೀಪ್ ಬಹದ್ದೂರ್ ಛೆಟ್ರಿ ಕಠ್ಮಂಡು ಪೋಸ್ಟ್‌ಗೆ ತಿಳಿಸಿದ್ದಾರೆ.

ಗಾಯಗೊಂಡ ಪ್ರಯಾಣಿಕರು ಮಕ್ವಾನ್‌ಪುರ ಜಿಲ್ಲೆಯ ಹೆಟೌಡಾದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಎಸ್‌ಪಿ ಛೆಟ್ರಿ ತಿಳಿಸಿದ್ದಾರೆ. ಬಸ್ ಚಾಲಕ ನಿದ್ರೆ ಮಂಪರಿನಲ್ಲಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು