News Karnataka Kannada
Monday, April 29 2024
ಕ್ರೈಮ್

ಅಂತರ್‌ರಾಜ್ಯ ದರೋಡೆಕೋರರ ಹೆಡೆಮುರಿ ಕಟ್ಟಿದ ಪೊಲೀಸರು: 9 ಮಂದಿ ಬಂಧನ

9 arrested in connection with inter-state gangsters
Photo Credit : News Kannada

ಬೀದರ್: ಬೀದರ್​ ಪೊಲೀಸರು ಅಂತರ್ ರಾಜ್ಯ ದರೋಡೆಕೋರರ ಹೆಡೆ ಮುರಿ ಕಟ್ಟಿದ್ದಾರೆ. ಬೀದರ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ, ದರೋಡೆ, ಮನೆಗಳ್ಳತನ ಸೇರಿ ಒಟ್ಟು ಐದು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು 9 ದರೋಡೆಕೋರರನ್ನು ಬಂಧಿಸಿದ್ದಾರೆ. ಹಾಗೂ 94 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಕಂಟೆನರ್ ಡ್ರೈವರ್​ಗೆ ಮತ್ತುಬರುವ ಇಂಜೆಕ್ಷನ್ ಚುಚ್ಚಿ ಲಾರಿ ಕದ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಲಾರಿಯಲ್ಲಿ ಸಾಗಿಸುತ್ತಿದ್ದ 50 ಲಕ್ಷ 76 ಸಾವಿರ ಮೌಲ್ಯದ 694 ಫ್ಯಾನ್ ಬಾಕ್ಸ್ ಲಾರಿ ವಶಕ್ಕೆ ಪಡೆಯಲಾಗಿದೆ. ಹಾಗೂ 12 ಲಕ್ಷ 82 ಸಾವಿರ ಮೌಲ್ಯದ 180 ಗ್ರಾಮ್ ಬಂಗಾರದ ಆಭರಣ, ಎರಡು ಕೆಜಿಯಷ್ಟು ಬೆಳ್ಳಿಯ ಆಭರಣ ಒಂದು ಬೈಕ್ 20 ಸಾವಿರ ನಗದು ಹಣ ವಶಕ್ಕೆ ಪಡೆಯಲಾಗಿದೆ. ಸಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಗಾಂಜಾ ಪ್ರಕರಣ ಭೇದಿಸಿದ್ದಾರೆ.

ಔರಾದ್ ತಾಲೂಕಿನ ವಿಜಯನಗರ ತಾಂಡಾದಲ್ಲಿ ರೈತ ತೊಗರಿ ಹೊಲದಲ್ಲಿ ಅಕ್ರಮವಾಗಿ 63.86 ಕೆಜಿಯಷ್ಟು 79 ಗಾಂಜಾ ಗಿಡಗಳನ್ನು ಬೆಳೆಸಿದ್ದ. ದಾಳಿ ಮಾಡಿದ ಪೊಲೀಸರು 25 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಒಟ್ಟು ಐದು ಪ್ರಕರಣದಲ್ಲಿ 94 ಲಕ್ಷ ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ.

ಈ ಎಲ್ಲಾ ಪ್ರಕರಣಗಳಲ್ಲಿ ಭಾಗಿಯಾಗಿದ್ದ 9 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್. ಎಲ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು