ಇಂಫಾಲ: ಜನಾಂಗೀಯ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ಹೆಚ್ಚು ಸಕ್ರಿಯವಾಗಿದ್ದ ಒಂಬತ್ತು ಮೈತೇಯಿ ಉಗ್ರಗಾಮಿ ಸಂಘಟನೆಗಳನ್ನು ಕೇಂದ್ರ ಗೃಹಸಚಿವಾಲಯ ನಿಷೇಧಿಸಿದೆ ಎಂದು ತಿಳಿದು ಬಂದಿದೆ.
ಫಿಜಾಮ್ ಹೇಮಜಿತ್ (20), ಹಿಜಾಮ್ ಲಿಂಥೋಯ್ಗಂಬಿ (17) ಎಂಬ ಯುವಕ ಮತ್ತು ಯುವತಿ ಜುಲೈ 6ರಂದು ನಾಪತ್ತೆಯಾಗಿದ್ದರು. ಅವರ ಮೃತದೇಹಗಳ ಚಿತ್ರಗಳು ಸೆ.25ರಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬಳಿಕ ಸಂಘಾಲ್ನಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿತ್ತು.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮ್ಯಾನ್ಮಾರ್ ಮೂಲದ ಭಯೋತ್ಪಾದಕ ಸಂಘಟನೆಯ ಇಬ್ಬರು ಸದಸ್ಯರನ್ನು ಮಣಿಪುರದ ಚುರಚಾಂದ್ಪುರದಲ್ಲಿ ಪೊಲೀಸರು ಬಂಧಿಸಿದ್ದು, ಶಸ್ತ್ರಾಸ್ತ್ರಗಳನ್ನು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಮಣಿಪುರ ಗಲಬೆಯ ಹಿಂದೆ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಸಂಘಟನೆಗಳ ಕೈವಾಡ ಇದೆ ಎಂದು ಈ ಹಿಂದೆ ಆರೋಪಿಸಲಾಗಿತ್ತು.