Categories: ಕ್ರೈಮ್

ಲೀವಿಂಗ್‌ ಟುಗೆದರ್‌ ನಲ್ಲಿದ್ದ ವಿವಾಹಿತೆ, ಪ್ರೇಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೆಂಗಳೂರು: ಲೀವಿಂಗ್‌ ಟುಗೆದರ್‌ ನಲ್ಲಿದ್ದ ವಿಚಾರ ಎಲ್ಲರಿಗೂ ಗೊತ್ತಾಯಿತು ಎಂಬ ಕಾರಣಕ್ಕೆ ವಿವಾಹಿತೆ ಹಾಗೂ ಆಕೆಯ ಪ್ರಿಯಕರ ಬೆಂಕಿ ಹಂಚಿಕೊಂಡು ಸಾವಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೊತ್ತನೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ಸೌಮಿನಿ ದಾಸ್ (20) ಹಾಗೂ ಅಬಿಲ್ ಅಬ್ರಾಹಂ (26) ಆತ್ಮಹತ್ಯೆಗೆ ಶರಣಾದವರು.

ಮೂಲತಃ ಬಂಗಾಳದ ಸೌಮಿನಿ ದಾಸ್ ವಿವಾಹವಾದ ಬಳಿಕ ನರ್ಸಿಂಗ್‌ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದಳು. ಈ ವೇಳೆ ಆಕೆಗೆ ಕೇರಳ ಮೂಲದ ಅಬಿಲ್ ಅಬ್ರಾಹಂ ಪರಿಚಯವಾಗಿದ್ದ. ಇಬ್ಬರ ನಡುವೆ ಪ್ರೀತಿ ಆರಂಭವಾಗಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ ಮೂರು ತಿಂಗಳ ಹಿಂದಷ್ಟೇ ಸೌಮಿನಿ ದಾಸ್ ಊರಿಗೆ ತೆರಳಿದ್ದಾಳೆ. ಈ ವೇಳೆ ಪತಿಯ ಜೊತೆ ಜಗಳವಾಡಿದ್ದು, ಮದುವೆಯಾದಾಗಿನಿಂದಲೂ ಕಿರುಕುಳ ನೀಡುತ್ತಿರುವುದಾಗಿ ಕಾರಣ ನೀಡಿ, ನಿನ್ನ ಜೊತೆ ನಾನು ಇರುವುದಿಲ್ಲ ಎಂದು ಗಂಡನಿಗೆ ಹೇಳಿ ಬೆಂಗಳೂರಿಗೆ ವಾಪಸ್‌ ಬಂದಿದ್ದಳು. ಪತ್ನಿಯ ನಡವಳಿಕೆಯಲ್ಲಿನ ಬದಲಾವಣೆ ಕಂಡು ಅನುಮಾನಗೊಂಡಿದ್ದ ಆತ ಬೆಂಗಳೂರಿನಲ್ಲಿ ವಿಚಾರಿಸಿದ್ದಾನೆ. ಈ ವೇಳೆ ಸೌಮಿನಿ ದಾಸ್‌ ಬೆಂಗಳೂರಿನಲ್ಲಿ ಬಿಲ್ ಅಬ್ರಾಹಂ ಎಂಬಾತನ ಜೊತೆ ಲೀವಿಂಗ್‌ ಟುಗೆದರ್‌ ರಿಲೇಷನ್‌ಶಿಪ್‌ನಲ್ಲಿ ಇರುವುದು ತಿಳಿದು ಬಂದಿದೆ.

ಪತ್ನಿಯ ಮತ್ತೊಂದು ಸಂಬಂಧ ತಿಳಿದು ಬರುತ್ತಿದ್ದಂತೆ ಪತಿ ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾನೆ. ಈ ಘಟನೆಯ ಬಳಿಕ ತಮ್ಮ ಪ್ರೀತಿ ವಿಚಾರ ಎಲ್ಲರಿಗೂ ತಿಳಿಯಿತು ಎಂದು ಸೌಮಿನಿ ದಾಸ್‌ ಗಂಡ ನಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ತಾವು ವಾಸವಾಗಿದ್ದ ಅಪಾರ್ಟ್‌ಮೆಂಟ್‌ನಲ್ಲಿಯೇ ಬೆಂಕಿಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾರೆ.

Umesha HS

Recent Posts

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

19 mins ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

41 mins ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

53 mins ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

1 hour ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

2 hours ago

ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಯುವಕನೊಬ್ಬನಿಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಮಣ್ಣೂರ್ ಗ್ರಾಮದ ಹೊರವಲಯದಲ್ಲಿ ನಡೆದಿದೆ.

3 hours ago