News Karnataka Kannada
Friday, May 03 2024
ಕ್ರೈಮ್

ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ: ಆರೋಪಿ ಅರೆಸ್ಟ್

ತನ್ನ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದಾನೆಂದು ವ್ಯಕ್ತಿ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಅರಸೀಕೆರೆ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Photo Credit : News Kannada

ಹಾಸನ: ತನ್ನ ವಿರುದ್ಧ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದಾನೆಂದು ವ್ಯಕ್ತಿ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಅರಸೀಕೆರೆ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅರಸೀಕೆರೆ ತಾಲೂಕಿನ ತೂಬಿನಕೆರೆ ಬೋವಿ ಕಾಲೋನಿ ನಿವಾಸಿ ಜಯಪ್ಪ (34) ಕೊಲೆಯಾದ ವ್ಯಕ್ತಿ. ಇದೆ ತಾಲೂಕಿನ ಕಾಳೆನಹಳ್ಳಿ ಹಟ್ಟಿಯ ಅಣ್ಣಯ್ಯ (24) ಕೊಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.

2021ರಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿದ ಪ್ರಕರಣದಲ್ಲಿ ಅಣ್ಣಯ್ಯ ಜೈಲು ಸೇರಿದ್ದನು. 2022ರ ಜುಲೈನಲ್ಲಿ ಅಣ್ಣಯ್ಯ ಬೇಲ್​​ ಮೇಲೆ ಹೊರಗಡೆ ಬಂದಿದ್ದಾನೆ. ಈ ಪ್ರಕರಣಕ್ಕೆ ಜಯಪ್ಪ ಪ್ರಮುಖ ಸಾಕ್ಷಿಯಾಗಿದ್ದರು. ಒಂದು ವೇಳೆ ಜಯಪ್ಪ ಸಾಕ್ಷಿ ಹೇಳಿದರೆ ಕಠಿಣ ಶಿಕ್ಷೆಯಾಗುವ ಭೀತಿಯಲ್ಲಿ ಅಣ್ಣಯ್ಯ ಇದ್ದನು. ಹೀಗಾಗಿ ರಾಜಿಯಾಗುವಂತೆ ಆರೋಪಿ ಅಣ್ಣಯ್ಯ ಜಯಪ್ಪನ ಹಿಂದೆ ಬಿದ್ದಿದ್ದನು. ಜಯಪ್ಪ ಜನವರಿ 31 ರಂದು ಹಾಸನ ನ್ಯಾಯಾಲಯದಲ್ಲಿ ಅಣ್ಣಯ್ಯನ ವಿರುದ್ಧ ಸಾಕ್ಷಿ ಹೇಳಿ ಮರಳಿ ಹೋಗುತ್ತಿದ್ದರು. ಈ ವೇಳೆ ಕಂಠಪೂರ್ತಿ ಕುಡಿಸಿ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ.

ಇತ್ತ ಮಗ ಮನೆಗೆ ಬಾರದಿದ್ದಕ್ಕೆ ಜಯಪ್ಪನ ತಾಯಿ ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪುತ್ರ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರಿಗೆ ಫೆಬ್ರವರಿ 2 ರಂದು ಹಾಸನ ಹೊರವಲಯದ ಬುಸ್ತೇನಹಳ್ಳಿ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಜಯಪ್ಪನ ಮೃತ ದೇಹ ಪತ್ತೆಯಾಗಿತ್ತು. ಪೊಲೀಸರು ಕೊಲೆ ಪ್ರಕರಣದ ತನಿಖೆ ನಡೆಸಿದಾಗ ಹತ್ಯೆ ರಹಸ್ಯ ಬಯಲಾಗಿದೆ. ಸದ್ಯ ಪೊಲೀಸರು ಆರೋಪಿ ಅಣ್ಣಯ್ಯನನ್ನು ಬಂಧಿಸಿದ್ದು, ಕಂಬಿ ಎಣಿಸುತ್ತಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು