News Karnataka Kannada
Sunday, April 28 2024
ಕ್ರೈಮ್

ಹೆತ್ತಬ್ಬೆಯನ್ನು ಬೀದಿ ಬದಿ ಬಿಟ್ಟುಹೋದ ಮಗಳು, ಅಳಿಯ

Anekal: Daughter leaves her mother on the roadside
Photo Credit : News Kannada

ಆನೇಕಲ್: ವಯಸ್ಸಾದ ವೃದ್ಧೆಯನ್ನು ಮಗಳು ಹಾಗೂ ಅಳಿಯ  ರಾತ್ರೋರಾತ್ರಿ ಕಾರಿನಲ್ಲಿ ಕರೆದುಕೊಂಡು ಬಂದು ರಸ್ತೆಯಲ್ಲಿ ಬಿಟ್ಟುಹೋದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ  ಸಮೀಪದ ವಿ.ಕಲ್ಲಹಳ್ಳಿಯಲ್ಲಿ ನಡೆದಿದೆ.

ಗ್ರೇಸಿ ಪೀಟರ್ (80) ಎಂಬ ವೃದ್ಧೆಯನ್ನು ರಸ್ತೆಯಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾರೆ.

ಮಗಳು ಆಶಾ ರಾಣಿ, ಅಳಿಯ ಮಂಜುನಾಥ್ ಹಾಗೂ ಮೊಮ್ಮಕ್ಕಳ ಜೊತೆ ವೃದ್ಧೆ ದೊಮ್ಮಸಂದ್ರದಲ್ಲಿ ವಾಸವಾಗಿದ್ದರು. ಇವರುಗಳ ಈ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಳಿಯ ಮಂಜುನಾಥ್ ದಿನನಿತ್ಯ ಕುಡಿದು ಬಂದು ವೃದ್ದೆಯ ಮೇಲೆ ಹಲ್ಲೆ ನಡೆಸುತ್ತಿದ್ದ. ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಕೂಡಾ ಮಾಡುತ್ತಿದ್ದ. ವೃದ್ಧೆಯ ಕಾಲು ಮುರಿದು ಈ ಪಾಪಿಗಳು ಹಲ್ಲೆ ನಡೆಸಿದ್ದರು. ಮೈಮೇಲಿನ ಗಾಯಗಳಿಂದ ವೃದ್ಧೆ ನರಳಾಡುತ್ತಿದ್ದರು.

ವೃದ್ಧೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಆಕೆಯನ್ನು ದೇವಾಲಯದ ಬಳಿ ಮಲಗಿಸಿ ಅಲ್ಲಿಂದ ಕಾರಿನಲ್ಲಿ ಪರಾರಿಯಾಗಿದ್ದಾರೆ.

ದೇವಾಲಯದ ಬಳಿ ಮಲಗಿದ್ದ ಈ ಹಿರಿ ಜೀವವನ್ನು ಗ್ರಾಮಸ್ಥರು ಗಮನಿಸಿ ಬನ್ನೇರುಘಟ್ಟದ ಆಶ್ರಮಕ್ಕೆ ರವಾನಿಸಿದ್ದು, ವೈದ್ಯರ ಚಿಕಿತ್ಸೆಯೊಂದಿಗೆ ವೃದ್ಧೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು