ಆನೇಕಲ್: ವಯಸ್ಸಾದ ವೃದ್ಧೆಯನ್ನು ಮಗಳು ಹಾಗೂ ಅಳಿಯ ರಾತ್ರೋರಾತ್ರಿ ಕಾರಿನಲ್ಲಿ ಕರೆದುಕೊಂಡು ಬಂದು ರಸ್ತೆಯಲ್ಲಿ ಬಿಟ್ಟುಹೋದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ವಿ.ಕಲ್ಲಹಳ್ಳಿಯಲ್ಲಿ ನಡೆದಿದೆ.
ಗ್ರೇಸಿ ಪೀಟರ್ (80) ಎಂಬ ವೃದ್ಧೆಯನ್ನು ರಸ್ತೆಯಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾರೆ.
ಮಗಳು ಆಶಾ ರಾಣಿ, ಅಳಿಯ ಮಂಜುನಾಥ್ ಹಾಗೂ ಮೊಮ್ಮಕ್ಕಳ ಜೊತೆ ವೃದ್ಧೆ ದೊಮ್ಮಸಂದ್ರದಲ್ಲಿ ವಾಸವಾಗಿದ್ದರು. ಇವರುಗಳ ಈ ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಳಿಯ ಮಂಜುನಾಥ್ ದಿನನಿತ್ಯ ಕುಡಿದು ಬಂದು ವೃದ್ದೆಯ ಮೇಲೆ ಹಲ್ಲೆ ನಡೆಸುತ್ತಿದ್ದ. ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದನೆ ಕೂಡಾ ಮಾಡುತ್ತಿದ್ದ. ವೃದ್ಧೆಯ ಕಾಲು ಮುರಿದು ಈ ಪಾಪಿಗಳು ಹಲ್ಲೆ ನಡೆಸಿದ್ದರು. ಮೈಮೇಲಿನ ಗಾಯಗಳಿಂದ ವೃದ್ಧೆ ನರಳಾಡುತ್ತಿದ್ದರು.
ವೃದ್ಧೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಆಕೆಯನ್ನು ದೇವಾಲಯದ ಬಳಿ ಮಲಗಿಸಿ ಅಲ್ಲಿಂದ ಕಾರಿನಲ್ಲಿ ಪರಾರಿಯಾಗಿದ್ದಾರೆ.
ದೇವಾಲಯದ ಬಳಿ ಮಲಗಿದ್ದ ಈ ಹಿರಿ ಜೀವವನ್ನು ಗ್ರಾಮಸ್ಥರು ಗಮನಿಸಿ ಬನ್ನೇರುಘಟ್ಟದ ಆಶ್ರಮಕ್ಕೆ ರವಾನಿಸಿದ್ದು, ವೈದ್ಯರ ಚಿಕಿತ್ಸೆಯೊಂದಿಗೆ ವೃದ್ಧೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…