ಬೆಳಗಾವಿ: ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿ, ಹಲ್ಲೆ ನಡೆಸಿ ಘಟನೆ ನಡೆದಿದೆ.
ಹಲ್ಲೆಗೊಳಗಾದ ಮಹಿಳೆಯನ್ನು, ಸುಗಂಧಾ ಮೋರೆ(50) ಎಂದು ಗುರುತಿಸಲಾಗಿದೆ. ಸುಂಗಧಾ ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
ಅಂಗನವಾಡಿ ಮಕ್ಕಳು ಪಕ್ಕದ ಮನೆಯ ಆವರಣದಲ್ಲಿ ಬೆಳೆಯಲಾಗಿದ್ದ ಹೂ ಕಿತ್ತರೂ ಎಂಬ ಕಾರಣಕ್ಕೆ ಅಂಗನವಾಡಿ ಸಹಾಯಕಿಗೆ ಅವಾಚ್ಯವಾಗಿ ನಿಂದಿಸಿ, ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಮನೆ ಮಾಲೀಕ ಕಲ್ಯಾಣಿ ಮೋರೆ ಎಂಬಾತ ಅಂಗನವಾಡಿ ಸಹಾಯಕಿಯ ಮೂಗನ್ನೇ ಕಟ್ ಮಾಡಿದ್ದಾನೆ.
ಸದ್ಯ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸುಗಂಧಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.