ಪಡುಬಿದ್ರಿ: ಇನ್ನಾ ಗ್ರಾಮದ ಮಡ್ಮಣ್ ನಿವಾಸಿ ವೆಂಕಪ್ಪ ಪೂಜಾರಿ(53) ಅವರು ನ. 1ರಂದು ಬೆಳಿಗ್ಗೆ ಪೇಸ್ಟ್ ಎಂದು ಭಾವಿಸಿ ಟ್ಯೂಬ್ನಲ್ಲಿದ್ದ ಇಲಿ ಪಾಷಾಣದಿಂದ ಹಲ್ಲುಜ್ಜಿ ಅಸ್ವಸ್ಥರಾಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅಸ್ವಸ್ಥರಾದ ಅವರನ್ನು ಆ ಕೂಡಲೇ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನ. 6ರಂದು ಅವರು ಸಾವನ್ನಪ್ಪಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣಾ ವರದಿಯು ತಿಳಿಸಿದೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ಇನ್ನಾ ಅವರು ವೆಂಕಪ್ಪ ಪೂಜಾರಿ ಅಕಾಲಿಕ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನಾ: ಪೇಸ್ಟ್ ಎಂದು ಇಲಿ ಪಾಷಾಣದಿಂದ ಹಲ್ಲುಜ್ಜಿದ ವ್ಯಕ್ತಿ ಸಾವು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.