ಮಂಗಳೂರು: ಕಡಲಿಗೆ ಹಾರಿ ಮದ್ಯವಯಸ್ಕ ಜೋಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ಬಾಪೂಜಿ ನಗರ ನಿವಾಸಿ ಬೋರಲಿಂಗಯ್ಯ (46) ಹಾಗು ಲಕ್ಷ್ಮಿ (43) ಎಂದು ಗುರುತಿಸಲಾಗಿದೆ.
ಮೃತ ಲಕ್ಷ್ಮಿ ಅವರನ್ನು ಬೋರಲಿಂಗಯ್ಯರ ಅಣ್ಣನ ಪತ್ನಿ ಎಂದು ಗುರುತಿಸಲಾಗಿದೆ. ಬೋರಲಿಂಗಯ್ಯ ಅವರು ಮನೆಬಿಟ್ಟು ಮಂಗಳೂರಿಗೆ ಬಂದಿದ್ದರು. ಅವರನ್ನು ಬೆಂಗಳೂರಿಗೆ ಕರೆತರಲು ಲಕ್ಷ್ಮಿ ಮಂಗಳೂರಿಗೆ ಬಂದಿದ್ದರು. ಇಂದು ಮುಂಜಾನೆ ಇಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಣಂಬೂರು ಪೊಲೀಸ್ ಠಾಣೆಯಲ್ಲಿಸದ್ಯ ಕೇಸ್ ದಾಖಲಾಗಿದೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.