ಉಡುಪಿ: ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನೆರವು ನೀಡಿದ್ದಾರೆ ಎಂಬ ಕಾರಣಕ್ಕಾಗಿ ಬಿಜೆಪಿ ಕಾರ್ಯಕರ್ತನಿಗೆ ಸ್ವಪಕ್ಷದ ಕಾರ್ಯಕರ್ತರೇ ಮಾರಣಾಂತಿಕ ಹಲ್ಲೆಗೈದ ಘಟನೆ ಬ್ರಹ್ಮಾವರ ತಾಲೂಕಿನ ಮುದ್ದೂರು ಎಂಬಲ್ಲಿ ನಡೆದಿದೆ.
ನೆಂಚಾರು ನಿವಾಸಿ ಪ್ರಭಾಕರ ಪೂಜಾರಿ (51) ಹಲ್ಲೆಗೆ ಒಳಗಾದ ಬಿಜೆಪಿ ಕಾರ್ಯಕರ್ತ. ಬಿಜೆಪಿ ಮುಖಂಡರಾದ ಪ್ರತಾಪ್ ಹೆಗ್ಡೆ, ಹರೀಶ್, ದಿನೇಶ್ ಮತ್ತು ಗಣೇಶ್ ಎಂಬವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನೆಂಚಾರು ಹಾಲು ಡೈರಿಗೆ ಹಾಲು ನೀಡಲು ಬಂದಿದ್ದ ಪ್ರಭಾಕರ ಪೂಜಾರಿಯನ್ನು ಅಪಹರಿಸಿ, ಬಿಜೆಪಿ ಮುಖಂಡ ಪ್ರತಾಪ್ ಹೆಗ್ಡೆ ಕಚೇರಿಗೆ ಕರೆದೊಯ್ದಿದ್ದಾರೆ. ಅಲ್ಲಿ ವಿದ್ಯುತ್ ತಂತಿಯಿಂದ ಮಾರಣಾಂತಿಕ ಹಲ್ಲೆ ಮಾಡಿ ಸಂಜೆಯವರೆಗೂ ಕಚೇರಿಯಲ್ಲಿ ಕೂಡಿಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಪ್ರಭಾಕರ ಪೂಜಾರಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.