News Karnataka Kannada
Monday, May 13 2024
ಕ್ರೈಮ್

ಕರಾಳ ಬುಧವಾರ: ಎರಡು ಪ್ರತ್ಯೇಕ ಅಪಘಾತದಲ್ಲಿ 6 ಮಂದಿ ಸಾವು

Black Wednesday: 6 killed in two separate accidents
Photo Credit : News Kannada

ಮಂಡ್ಯ: ಬುಧವಾರ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ.

ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​​​ಗೆ ಹಾಸನ ಕಡೆಯಿಂದ ಬಂದ ಮಾರುತಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬೆಳ್ಳೂರು ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಕ್ಸೆಂಚರ್‌ ಕಂಪನಿ ಉದ್ಯೋಗಿಗಳಾದ ಬೆಂಗಳೂರಿನ ನಮಿತಾ, ಧಾರವಾಡದ ರಘುನಾಥ್‌ ಭಜಂತ್ರಿ, ಇನ್‌ಫೋಸಿಸ್‌ ಉದ್ಯೋಗಿ ರಾಜಸ್ಥಾನ ಮೂಲದ ಪಂಕಜ್‌ ಶರ್ಮಾ, ಬೆಂಗಳೂರಿನ ವಂಶಿ ಕೃಷ್ಣ ಮೃತಪಟ್ಟವರು.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ಮುಂಭಾಗ ರಸ್ತೆ ಬದಿ ನಿಂತಿದ್ದ KSRTC ಬಸ್​ ಹಿಂಬದಿಗೆ KA-02 MM 1802 ನಂಬರಿನ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂದಿನ ಅರ್ಧ ಭಾಗ ಬಸ್​ನೊಳಗೆ ಹೊಕ್ಕಿದೆ. ಸ್ಥಳಕ್ಕೆ ಬೆಳ್ಳೂರು ಪೊಲೀಸರ ಭೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ.

ಬೈಕ್‌ಗಳ ನಡುವೆ ಡಿಕ್ಕಿ: ಇಬ್ಬರು ಸಾವು:

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ಬೈಕ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೋಟಬಂಡೆ ಗ್ರಾಮದ ಈಶ್ವರಪ್ಪ(36), ನಾಗರಾಜು(42) ಮೃತ ದುರ್ದೈವಿಗಳು. ಘಟನೆಯಲ್ಲಿ ಚಿಕ್ಕತಿಮ್ಮನಹಟ್ಟಿ‌ ಗ್ರಾಮದ ದರ್ಶನ್(28) ಎಂಬಾತನಿಗೆ ಗಾಯಗಳಾಗಿವೆ. ಗೌರಸಂದ್ರ ಮಾರಮ್ಮ ಜಾತ್ರೆ ಮುಗಿಸಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು