ಹುಣಸೂರು: ಅನ್ಯಕೋಮಿನ ಹುಡುಗನನ್ನು ಪ್ರೀತಿಸಿದಕ್ಕಾಗಿ ತನ್ನ ತಂಗಿಯ ಜೊತೆಗೆ ತಾಯಿಯನ್ನು ಕೂಡ ಕೆರೆಗೆ ತಳ್ಳಿ ಕೊಲೆಗೈದಿರುವ ದುರಂತ ಘಟನೆ ಹುಣಸೂರು ತಾ|ಮರೂರು ಗ್ರಾಮದಲ್ಲಿ ನಡೆದಿದೆ.
ಸ್ವಂತ ಮಗನಿಂದಲೇ ಕೃತ್ಯ ನಡೆದಿದ್ದು ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅನ್ಯ ಕೋಮಿನ ಹುಡುಗನನ್ನ ತಂಗಿ ಪ್ರೀತಿಸಿದ್ದ ಹಿನ್ನಲೆ ದ್ವೇಷ ಬೆಳೆಸಿಕೊಂಡಿದ್ದ ಅಣ್ಣ ಕೃತ್ಯವೆಸಗಿದ್ದಾನೆ. ತಂಗಿಯನ್ನ ಕೆರೆಗೆ ತಳ್ಳಿದ ವೇಳೆ ರಕ್ಷಿಸಲು ಬಂದ ತಾಯಿಯನ್ನೂ ಸಹ ಕೆರೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಹಿರಿಕ್ಯಾತನಹಳ್ಳಿಯ ಅನಿತಾ(40) ಹಾಗೂ ಮಗಳು ಧನುಶ್ರೀ(19) ಮೃತ ದುರ್ದೈವಿಗಳು. ಹನಗೋಡು ಗ್ರಾಮದ ಅನ್ಯಕೋಮಿನ ಯುವಕನನ್ನ ಧನುಶ್ರೀ ಪ್ರೀತಿಸುತ್ತಿದ್ದಳು. ಈ ವಿಚಾರದಲ್ಲಿ ಅಣ್ಣ ತಂಗಿಯರ ನಡುವೆ ವೈ ಮನಸ್ಸು ಬೆಳೆದಿತ್ತು. ಆಗಾಗ ಇಬ್ಬರ ನಡುವೆ ಗಲಾಟೆ ಆಗಿತ್ತು. ಆದರೆ ಕಳೆ ದಿನ ಸಂಜೆ ಹೆಮ್ಮಿಗೆ ಗ್ರಾಮದಲ್ಲಿರುವ ಮಾವನ ಮನೆಗೆ ಹೋಗುವ ಕಾರಣ ನೀಡಿ ತಾಯಿ ಹಾಗೂ ತಂಗಿಯನ್ನ ನಿತಿನ್ ಬೈಕ್ ನಲ್ಲಿ ಕರೆದೊಯ್ದಿದ್ದಾನೆ.
ಬಳಿಕ ಮರೂರು ಕೆರೆ ಬಳಿ ಬೈಕ್ ನಿಲ್ಲಿಸಿ ಮೊದಲು ತಂಗಿಯನ್ನ ಕೆರೆಗೆ ತಳ್ಳಿದ್ದಾನೆ. ನಂತರ ಮಗಳನ್ನ ರಕ್ಷಿಸಲು ಬಂದ ತಾಯಿಯನ್ನೂ ಸಹ ಕೆರೆಗೆ ತಳ್ಳಿದ್ದಾನೆ. ನಂತರ ಪಶ್ಚಾತ್ತಾಪ ಪಟ್ಟು ತಾಯಿಯನ್ನ ರಕ್ಷಿಸಿಕೊಳ್ಳಲು ನಿತಿನ್ ಕೆರೆಗೆ ಹಾರಿದ್ದಾನೆ.ಆದ್ರೆ ಇಬ್ಬರೂ ಸಾವನ್ನಪ್ಪಿದ್ದಾರೆ.
ಒದ್ದೆ ಬಟ್ಟೆಯಲ್ಲೇ ಮನೆಗೆ ಹಿಂದಿರುಗಿ ತಂದೆ ಸತೀಶ್ ಬಳಿ ನಡೆದ ಘಟನೆಯನ್ನ ನಿತಿನ್ ತಿಳಿಸಿದ್ದಾನೆ.ಆರೋಪಿ ನಿತಿನ್ ನ ಹುಣಸೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನ ಹೊರತೆಗೆದಿದ್ದಾರೆ.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.