Categories: ಕ್ರೈಮ್

ನಿಂತಿದ್ದ ಬಿಎಂಟಿಸಿ ಬಸ್​ಗೆ ಕಾರು ಡಿಕ್ಕಿ: ಬೆಂಕಿಗಾಹುತಿಯಾದ ಕಾರು

ಬೆಂಗಳೂರು: ನಿಂತಿದ್ದ ಬಿಎಂಟಿಸಿ ಬಸ್​ಗೆ  ವೇಗವಾಗಿ ಬಂದ I20 ಕಾರು ಹಿಂಬದಿಯಿಂದ  ಡಿಕ್ಕಿಯಾಗಿ ಬೆಂಕಿ ಹತ್ತಿಕೊಂಡು ಕಾರು ಹೊತ್ತಿ ಉರಿದ ಘಟನೆ ನಾಯಂಡಹಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ.

ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುತ್ತಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಬಸ್​ನ ಹಿಂದಿನ ಭಾಗ ಸ್ವಲ್ಪ ಬೆಂಕಿಗಾಹುತಿಯಾಗಿದೆ. ವೇಗವಾಗಿ ಕಾರ್ ಬಂದು ಡಿಕ್ಕಿ ಹೊಡೆದ ಹಿನ್ನೆಲೆ ಕಾರು ಚಾಲಕನಿಗೆ ಮೂಗಿನ ಬಳಿ ಕೊಂಚ ಗಾಯಗಳಾಗಿವೆ.

ಯಶವಂತಪುರ ಟು ಬನಶಂಕರಿ ಮಾರ್ಗದಲ್ಲಿ ಸಂಚರಿಸುವ ಬನಶಂಕರಿ ಡಿಪೋನ 26ರ ಮಾರ್ಗದ 401NY ಬಸ್​ ಸಂಖ್ಯೆ F4968ರ ಬಸ್ ಇದಾಗಿದ್ದು ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಚಂದ್ರಲೇಔಟ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ಹಾಗೂ ಹತ್ತಿಸಲು ನಿಲ್ಲಿಸಿದ್ದ ವೇಳೆ ಕಾರು​ ವೇಗವಾಗಿ ಬಂದು ಬಸ್​​ಗೆ ಗುದ್ದಿದೆ.

 

Ashika S

Recent Posts

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

7 mins ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

24 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

28 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

39 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

44 mins ago

ಮಾಜಿ ಸಚಿವ ಹೆಚ್​.ಡಿ ರೇವಣ್ಣಗೆ ಬಿಗ್ ರಿಲೀಫ್

ಮಾಜಿ ಸಚಿವ ಹೆಚ್​.ಡಿ ರೇವಣ್ಣ ಅವರಿಗೆ 42ನೇ ಎಸಿಎಂಎಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಮಧ್ಯಂತರ ಜಾಮೀನು ಪಡೆದು ಹೊರಗಿದ್ದ…

1 hour ago