ಉತ್ತರ ಪ್ರದೇಶ: ಶನಿವಾರ ತಡರಾತ್ರಿ ಹೆದ್ದಾರಿಯಲ್ಲಿ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ ಎಂಟು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನಡೆದಿದೆ.
ಕಾರು ಸೆಂಟರ್ ಲಾಕ್ ಆಗಿದ್ದ ಕಾರಣ ಕಾರಿನಲ್ಲಿದ್ದವವರು ಹೊರಗೆ ಬರಲು ಸಾಧ್ಯವಾಗದೆ ಜೀವಂತವಾಗಿ ಸುಟ್ಟು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಎದುರಿನ ಲೇನ್ಗೆ ತಿರುಗಿ ಟ್ರಕ್ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಬರೇಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಚಂದ್ರ ಭನ್ ಧುಲೆ ತಿಳಿಸಿದ್ದಾರೆ.