ವಿಜಯನಗರ: ಆಘಾತಕಾರಿ ಘಟನೆಯೊಂದರಲ್ಲಿ ತನ್ನ ಮಾತು ಕೇಳುತ್ತಿಲ್ಲವೆಂದು ಕೇರಳಿದ ತಾಯಿ ಮಕ್ಕಳಿಗೆ ದೊಣ್ಣೆಯಿಂದ ಹೊಡೆದು ತಾನು ನೇಣಿಗೆ ಶರಣಾದ ಘಟನೆ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ತಾಯಿಯ ಹಲ್ಲೆಯಿಂದ ಪುತ್ರಿ ಶಮಾ ಭಾನು (18) ಮೃತಪಟ್ಟಿದ್ದು, ಪುತ್ರ ಅಮಾನುಲ್ಲಾ (16) ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆಗೈದ ಬೇಗಂಬಿ ಶಫಿಸಾಬ್ (50) ನೇಣಿಗೆ ಶರಣಾಗಿದ್ದಾಳೆ. ತನ್ನ ಮಾತು ಕೇಳುತ್ತಿಲ್ಲ ಎಂದು ತಾಯಿ ಬೇಗಂಬಿ ಶಫಿಸಾಬ್ ಇಬ್ಬರು ಮಕ್ಕಳನ್ನು ಕೊಲೆ ಮಾಡಲು ನಿರ್ಧರಿಸಿದ್ದಳು.
ಅದರಂತೆ ತಡರಾತ್ರಿ ಮಲಗಿದ್ದ ಶಮಾ ಭಾನು ಮತ್ತು ಅಮಾನುಲ್ಲಾಗೆ ದೊಣ್ಣೆಯಿಂದ ಹೊಡೆದಿದ್ದಾಳೆ. ಇಬ್ಬರು ಮಕ್ಕಳು ಮೃತಪಟ್ಟರೆಂದು ಬೇಗಂಬಿ ಶಫಿಸಾಬ್ ನೇಣಿಗೆ ಶರಣಾಗಿದ್ದಾಳೆ. ಬೆಳಿಗ್ಗೆ ಅಕ್ಕಪಕ್ಕದವರು ನೋಡಿದಾಗ ಉಸಿರಾಡುತ್ತಿದ್ದ ಮಗನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಭೇಟಿ ಪರಿಶೀಲನೆ ನಡೆಸಿದ್ದಾರೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.