News Karnataka Kannada
Sunday, April 28 2024
ಮನರಂಜನೆ

ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ನಟ ಚೇತನ್ ವಿರುದ್ಧ ದೂರು ದಾಖಲು

ಒಂದಲ್ಲ ಒಂದು ವಿಚಾರದಲ್ಲಿ ವಿವಾದಿತ ಟ್ವೀಟ್‌ ಮಾಡುವ ಮೂಲಕ ಸುದ್ದಿಯಲ್ಲಿರುವ ನಟ ಚೇತನ್‌ ಕುಮಾರ್‌ ಅಹಿಂಸಾ ಈಗ ಸ್ವಾಮಿ ವಿವೇಕಾನಂದರ ವಿಚಾರವಾಗಿ ಟೀಕೆ ಮಾಡುವ ಮೂಲಕ ಟಾರ್ಗೆಟ್‌ ಆಗಿದ್ದಾರೆ.
Photo Credit : News Kannada

ಬೆಂಗಳೂರು: ನಕಾರಾತ್ಮಕ ಸುದ್ದಿಗಳಿಗೆ ಸದಾ ಚರ್ಚೆಯಲ್ಲಿರುವ ಸ್ಯಾಂಡಲ್​ವುಡ್ ನಟ ಚೇತನ್ ಅಹಿಂಸಾ ವಿರುದ್ಧ ಈಗ ದೂರು ದಾಖಲಾಗಿದೆ.

ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ  ಅವಹೇಳನಕಾರಿ ಪೋಸ್ಟ್ ಹಾಕಿ  ಅಗೌರವ ತೋರಿದ್ದಾರೆಂದು ಆರೋಪಿಸಿ ವಕೀಲ ಆರ್​ಎಲ್​ಎನ್ ಮೂರ್ತಿ  ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಫೇಸ್​ಬುಕ್ ಖಾತೆಯಲ್ಲಿ ಇಬ್ಬರು ಯೋಧರ ಕಥೆ ಎಂದು ಬರೆದುಕೊಂಡು, ಬೆಂಗಳೂರು ನಿರ್ಮಾತೃ ಕೆಂಪೇಗೌಡರನ್ನು ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ಜರಿದು ಟಿಪ್ಪು ಸುಲ್ತಾನ್​ನನ್ನು ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ ಎಂದು ಹೇಳಿಕೊಂಡಿದ್ದಾರೆ.

ಸದ್ಯ, ವಕೀಲ ಆರ್​ಎಲ್​ಎನ್​ ಮೂರ್ತಿ ಅವರು ನೀಡಿದ ದೂರನ್ನು ಸ್ವೀಕರಿಸಿದ ಶೇಷಾದ್ರಿಪುರಂ ಠಾಣಾ ಪೊಲೀಸರು ನಟ ಚೇತನ್ ಅಹಿಂಸಾ ವಿರುದ್ಧ ಎನ್​ಸಿಆರ್​ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚೇತನ್ ಪೋಸ್ಟ್​​ನಲ್ಲಿ ಏನಿದೆ?: ಕೆಂಪೇಗೌಡ- ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಐಕಾನ್ ಆಗಿದ್ದಾರೆ. ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್-ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ ಅಥವಾ ಅವಳ ಸಾಮಾಜಿಕ ಕೊಡುಗೆಗಳಿಂದ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಬರೆದುಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು