ಬೆಂಗಳೂರು: ನಕಾರಾತ್ಮಕ ಸುದ್ದಿಗಳಿಗೆ ಸದಾ ಚರ್ಚೆಯಲ್ಲಿರುವ ಸ್ಯಾಂಡಲ್ವುಡ್ ನಟ ಚೇತನ್ ಅಹಿಂಸಾ ವಿರುದ್ಧ ಈಗ ದೂರು ದಾಖಲಾಗಿದೆ.
ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಅವಹೇಳನಕಾರಿ ಪೋಸ್ಟ್ ಹಾಕಿ ಅಗೌರವ ತೋರಿದ್ದಾರೆಂದು ಆರೋಪಿಸಿ ವಕೀಲ ಆರ್ಎಲ್ಎನ್ ಮೂರ್ತಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಫೇಸ್ಬುಕ್ ಖಾತೆಯಲ್ಲಿ ಇಬ್ಬರು ಯೋಧರ ಕಥೆ ಎಂದು ಬರೆದುಕೊಂಡು, ಬೆಂಗಳೂರು ನಿರ್ಮಾತೃ ಕೆಂಪೇಗೌಡರನ್ನು ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ಜರಿದು ಟಿಪ್ಪು ಸುಲ್ತಾನ್ನನ್ನು ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ ಎಂದು ಹೇಳಿಕೊಂಡಿದ್ದಾರೆ.
ಸದ್ಯ, ವಕೀಲ ಆರ್ಎಲ್ಎನ್ ಮೂರ್ತಿ ಅವರು ನೀಡಿದ ದೂರನ್ನು ಸ್ವೀಕರಿಸಿದ ಶೇಷಾದ್ರಿಪುರಂ ಠಾಣಾ ಪೊಲೀಸರು ನಟ ಚೇತನ್ ಅಹಿಂಸಾ ವಿರುದ್ಧ ಎನ್ಸಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೇತನ್ ಪೋಸ್ಟ್ನಲ್ಲಿ ಏನಿದೆ?: ಕೆಂಪೇಗೌಡ- ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಐಕಾನ್ ಆಗಿದ್ದಾರೆ. ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್-ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ ಅಥವಾ ಅವಳ ಸಾಮಾಜಿಕ ಕೊಡುಗೆಗಳಿಂದ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಬರೆದುಕೊಂಡಿದ್ದರು.