News Karnataka Kannada
Thursday, May 09 2024
ಕ್ರೈಮ್

ಜನನಿಬಿಡ ಪ್ರದೇಶದಲ್ಲಿ ಸೈಕಲ್ ಸವಾರನ ಮೇಲೆ ಕಾರು ಹತ್ತಿಸಿ ಹತ್ಯೆ

Cyclist killed after being hit by car in a crowded area
Photo Credit : News Kannada

ಬೆಂಗಳೂರು: ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರಾತ್ರಿ ಕತ್ತಲಲ್ಲಿ ಉದ್ದೇಶಪೂರ್ವಕವಾಗಿ ಸ್ಪೋರ್ಟ್ಸ್​​​ ಕಾರೊಂದು ಮೋಟಾರು ಸೈಕಲ್ ಸವಾರನ ಮೇಲೆ ಹತ್ತಿಸಿ, ಆತನನ್ನು ನೆಲಕ್ಕೆ ಬೀಳಿಸಿ, ಮತ್ತೆ ಆತನ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲಾಗಿದೆ.

ಈ ಹತ್ಯೆ ಆರೋಪದ ಮೇಲೆ ಬೆಂಗಳೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ದಾರುಣ ಘಟನೆ ಪುಲಿಕೇಶಿ ನಗರದಲ್ಲಿ ನಡೆದಿದ್ದು, ಅಕ್ಟೋಬರ್ 18 ರ ಮಧ್ಯರಾತ್ರಿ 12:30 ರ ಸುಮಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ. ಇನ್ನೊಂದು ವಿಚಾರವೆಂದರೆ, ಈ ಘಟನೆಯ ದೃಶ್ಯವನ್ನು ದಾರಿಹೋಕರು ಮೊಬೈಲ್​​ನಲ್ಲಿ ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ವರದಿಗಳ ಪ್ರಕಾರ, ಈ ಪ್ರಕರಣದ ಪ್ರಾಥಮಿಕ ಶಂಕಿತನನ್ನು ಅಮರೀನ್ ಎಂದು ಗುರುತಿಸಲಾಗಿದೆ. ಈ ಭೀಕರ ಘಟನೆಗೆ ಮೂಲ ಕಾರಣ ಆರೋಪಿಗಳಾದ ಅಮರೀನ್ ಮತ್ತು ಅಸ್ಗರ್ ನಡುವಿನ ಹಣಕಾಸಿನ ವಿವಾದ. ಅಮರೀನ್ ಅವರು ಅಸ್ಗರ್ ಅವರಿಂದ ವಾಹನವನ್ನು ಪಡೆದಿದ್ದರು. ಆದರೆ 4 ಲಕ್ಷ ರೂಪಾಯಿ ಸಾಲವನ್ನು ವಾಪಸ್​ ಕೊಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ಕೃತ್ಯ ನಡೆದಿದೆ ಎಂದು ವರದಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು