ಹಾಸನ: ಹಾಸನಾಂಬೆ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆಯಲು ಸಂತೇಪೇಟೆಯ ಧರ್ಮ ದರ್ಶನ ಸರತಿ ಸಾಲಿನಲ್ಲಿ ನಿಂತಿದ್ದಾಗ ಕೆಲವು ಭಕ್ತರಿಗೆ ವಿದ್ಯುತ್ ಶಾಕ್ ಹೊಡೆದ ಘಟನೆ ನಡೆದಿದೆ.
ಇದರಿಂದ ಭಯಭೀತರಾದ ಭಕ್ತರು ಸ್ಥಳದಿಂದ ಓಡಿದ್ದು, ಅಲ್ಲಿ ನೂಕುನುಗ್ಗಲು ಉಂಟಾಗಿದೆ. ನೂಕುನುಗ್ಗಲು ವೇಳೆ ಮಹಿಳೆಯರು, ಯುವತಿಯರು ನೆಲಕ್ಕೆ ಬಿದ್ದಿದ್ದು, ಹಲವರಿಗೆ ಗಾಯಗಳಾಗಿವೆ. ಸದ್ಯ ಗಯಾಗೊಂಡ ಭಕ್ತರನ್ನು ಹಾಸನ ಆಸ್ಪತ್ರೆಗೆ ದಾಖಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಭಕ್ತರೊಬ್ಬರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ಸಾರ್ವಜನಿಕರ ದರ್ಶನಕ್ಕೆ ಸರಿಯಾಗಿ ವ್ಯವಸ್ಥೆ ಮಾಡಿಲ್ಲ. ಕೇವಲ ರಾಜಕಾರಣಗಳಿಗೆ, ಸಿನಿಮಾದವರಿಗೆ, ದೊಡ್ಡ-ದೊಡ್ಡ ವ್ಯಕ್ತಿಗಳಿಗೆ ಮಾತ್ರ ಸಕಲ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜಕನಿಕರು ಅಮ್ಮನ ದರ್ಶನ ಮಾಡುವುದಕ್ಕೆ ಇಕ್ಕಟ್ಟಿನಲ್ಲೇ ಹೋಗಬೇಕು ಎಂದು ಅಸಮಾಧಾನ ಹೊರಹಾಕಿದ್ದಾರೆ.