ತಿರುವನಂತಪುರಂ: ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಕ್ರೈಸ್ತರ ಧಾರ್ಮಿಕ ಸಭೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೇರಿದೆ. ಅಲ್ಲದೆ ಐವತ್ತೂಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಕೊಚ್ಚಿಯಿಂದ ಈಶಾನ್ಯಕ್ಕೆ ಸುಮಾರು 10 ಕಿಲೋ ಮೀಟರ್ ದೂರದಲ್ಲಿರುವ ಕಲಮಸ್ತೇರಿಯ ಯಹೋವನ ಸತ್ಯಗಳು ಕಾರ್ಯಕ್ರಮಕ್ಕೆ ಸುಮಾರು 2 ಸಾವಿರ ಮಂದಿ ಬಂದಿದ್ದರು.
ಈ ವೇಳೆ ಕನ್ವೆನ್ಷನ್ ಹಾಲ್ ನಲ್ಲಿ ಕನಿಷ್ಠ ಮೂರು ಸ್ಫೋಟಗಳು ಸಂಭವಿಸಿದೆ ಎಂದು ವರದಿಗಳು ಹೇಳಿವೆ