ಬಳ್ಳಾರಿ: ನಕಲಿ ನೋಟ್ ಮುದ್ರಣ ಮತ್ತು ಚಲಾವಣೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಯುವಕ ಸೇರಿದಂತೆ ವಿವಿಧ ರಾಜ್ಯದ ನಾಲ್ವರನ್ನು ಎನ್ಐಎ ತಂಡ ಬಂಧಿಸಿದೆ.
ಬಂಧಿಸಲಾದ ಬಳ್ಳಾರಿಯ ಆರೋಪಿಯನ್ನು ಗೌತಮ ನಗರದ ಮಹೇಂದ್ರ (19) ಎಂದು ಗುರುತಿಸಲಾಗಿದೆ.
ಅಲ್ಲದೆ ಉಳಿದ ನಾಲ್ವರನ್ನು, ಉತ್ತರ ಪ್ರದೇಶದ ಮೂಲದ ಕಿಂಗ್ಪಿನ್ಗಳಾದ ರಾಹುಲ್ ತಾನಜಿ ಪಾಟೀಲ್, ಮಹಾರಾಷ್ಟ್ರದ ಶಿವು ಪಾಟೀಲ್, ವಿವೇಕ್ ಠಾಕೂರ್, ಬಿಹಾರದ ಶಶಿಭೂಷಣ್ ಎಂಬ ನಾಲ್ವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಬಳ್ಳಾರಿ ಯುವಕ ಒಮ್ಮೆಯೂ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ರಾಜ್ಯಗಳಿಗೆ ಹೋಗಿಲ್ಲ ಎನ್ನಲಾಗಿದೆ. ಆತನಿಗೆ ಪ್ರಮುಖ ಆರೋಪಿಗಳ ಪರಿಚಯ ಹೇಗೆ ಆಗಿದೆ ಎಂಬುದು ಇನ್ನೂತಿಳಿದು ಬಂದಿಲ್ಲ.
ಆರೋಪಿ ಮಹೇಂದ್ರನ ಮನೆಯಲ್ಲಿ 500 ರೂ. ಮುಖಬೆಲೆಯ ಅಚ್ಚಿನ ಮಾದರಿ ಮತ್ತು ಒಂದು ಮುದ್ರಣ ಯಂತ್ರವನ್ನು ಸೀಜ್ ಮಾಡಲಾಗಿದೆ. ಮಹೇಂದ್ರ ಕಳೆದ ಎರಡು ವರ್ಷಗಳ ಹಿಂದೆ ಬಳ್ಳಾರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದ. ಯುವಕನ ಮನೆ ಪರಿಸ್ಥಿತಿ ಹಾಗೂ ಅಲ್ಲಿನ ವಾತಾವರಣ ನೋಡಿದರೆ ಯುವಕನಿಗೆ ಇಷ್ಟೊಂದು ದೊಡ್ಡ ಮಟ್ಟದ ಕಾಂಟ್ಯಾಕ್ಟ್ ಹೇಗೆ ಎಂಬುದು ಹಲವು ಶಂಕೆಗಳಿಗೆ ಕಾರಣವಾಗಿದೆ.