ರಾಮನಗರ: ಕಾಡಾನೆ ದಾಳಿಯಿಂದ ವೃದ್ಧರೊಬ್ಬರು ಮೃತಪಟ್ಟ ಘಟನೆ ಕನಕಪುರ ತಾಲೂಕು ಹೊನ್ನಿಗಾನ ಹಳ್ಳಿ ಬಳಿ ನಡೆದಿದೆ.
ಮರಿಗೌಡ( 57) ಕಾಡಾನೆ ದಾಳಿಗೆ ಬಲಿಯಾದವರು.
ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿರುವ ವೇಳೆ ಏಕಾಏಕಿ ದಾಳಿ ನಡೆಸಿದ ಒಂಟಿ ಸಲಗ ದಾಳಿ ಮಾಡಿ ಅವರನ್ನು ತಿವಿದು ಹಾಕಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳು ಪರಿಹಾರ ಕೊಡಿಸುವುದಾಗಿ ಮೃತರ ಕುಟುಂಬಕ್ಕೆ ಭರವಸೆ ನೀಡಿದ್ದಾರೆ.