ಕ್ರೈಮ್

ಫ್ಯಾಶನ್ ಡಿಸೈನರ್ ಅವಿವ ಬಿಡಪ ಸಹೋದರನಿಂದ ಪುಂಡಾಟ: ಎಫ್‌ಐಆರ್‌ ದಾಖಲು

ಬೆಂಗಳೂರು: ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿಡಪ ಪುತ್ರ, ಅಭಿಷೇಕ್ ಅಂಬರೀಶ್ ಪತ್ನಿ ಫ್ಯಾಶನ್ ಡಿಸೈನರ್ ಅವಿವಾ ಸಹೋದರನ ಪುಂಡಾಟಕ್ಕೆ ಪೊಲೀಸರೇ ಸುಸ್ತಾಗಿದ್ದಾರೆ.

ಪ್ರಸಾದ್ ಬಿಡಪ ಪುತ್ರ ಆ್ಯಡಂ ಬಿಡಪ ಮದ್ಯ ಸೇವಿಸಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದಲ್ಲದೇ ಬೇರೊಬ್ಬರ ಕಾರಿಗೂ ಡಿಕ್ಕಿ ಹೊಡೆದು ಗಲಾಟೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆತನನ್ನು ನಿಯಂತ್ರಿಸಲು ಬಂದ ಪೊಲೀಸರೊಂದಿಗೂ ದುರ್ವರ್ತನೆ ತೋರಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಘಟನೆ ಅ.25ರಂದು ಯಲಹಂಕ ನ್ಯೂಟೌನ್ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಆ್ಯಡಂ ರೈಲ್​ ವ್ಹೀಲ್​ ಫ್ಯಾಕ್ಟರಿ ಬಳಿ ರ‍್ಯಾಶ್​ ಆಗಿ ಕಾರು ಚಾಲನೆ ಮಾಡಿದ್ದಾರೆ. ಆ್ಯಡಂ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸುತ್ತಿದ್ದಾಗ ಹಿಂಬದಿ ವಾಹನ ಸವಾರ ಹಾರನ್ ಮಾಡಿದ್ದಾರೆ. ವಾಹನ ಅಡ್ಡಗಟ್ಟಿ ಸವಾರನಿಗೆ ಆ್ಯಡಂ ಬಿಡಪ ಬೆದರಿಕೆ ಹಾಕಿದ್ದಾರೆ.

ಕೂಡಲೇ ವಾಹನ ಸವಾರ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರ ಜೊತೆಯೂ ಆ್ಯಡಂ ಬಿಡಪ ದುರ್ವರ್ತನೆ ತೋರಿದ್ದಾರೆ. ಅವರನ್ನು ನಿಯಂತ್ರಿಸಲು ನಮಗೂ ಕಷ್ಟ ಆಗಿದೆ. ಬಳಿಕ ವಾಹನ ಸವಾರನ ದೂರಿನ ಮೇರೆಗೆ ಆ್ಯಡಂ ಬಿಡಪ ವಿರುದ್ಧ ಎಫ್ ಐ ಆರ್ ದಾಖಲು ಮಾಡಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ashika S

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

19 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

37 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

55 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago