ದೆಹಲಿ: ಸಂಸತ್ತಿನಲ್ಲಿ ಭದ್ರತೆ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸದನಕ್ಕೆ ನುಗ್ಗಿ ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಸ್ಪೀಕರ್ ಬಳಿ ಹಾರಿ ಬಂದು ಅಶ್ರುವಾಯು ಸಿಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳ ಪೈಕಿ ಐವರನ್ನು ಬಂಧಿಸಿದ್ದಾರೆ.
ಆರೋಪಿಗಳಾದ ಸಾಗರ್ ಶರ್ಮಾ ಮತ್ತು ಮನೋರಂಜನ್ ಮತ್ತು ಇತರೆ ಇಬ್ಬರನ್ನು ಗುಪ್ತಚರ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸಿದೆ.
ಸಂಸತ್ತಿನಲ್ಲಿ 4 ಜನರನ್ನು ಬಂಧಿಸಿದ ನಂತರ ಪೊಲೀಸರು ಐದನೇ ವ್ಯಕ್ತಿಗಾಗಿ ಹುಡುಕಾಟ ನಡೆಸಿದರು. ನೀಲಂ ಮತ್ತು ಅನ್ಮೋಲ್ ಅವರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಚಿತ್ರೀಕರಿಸುತ್ತಿರುವುದು ಕಂಡುಬಂದಿದೆ. ಪೊಲೀಸರು ಮಹಿಳೆಯನ್ನು ಕರೆದುಕೊಂಡು ಹೋಗುವುದನ್ನು ಕಂಡ ಕೂಡಲೇ ಓಡಿ ಹೋಗಿದ್ದಾನೆ.
ನಂತರ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದರು ಮತ್ತು ಅವರನ್ನು ಗುರುಗ್ರಾಮದಲ್ಲಿ ಬಂಧಿಸಲಾಯಿತು. ವ್ಯಕ್ತಿಯನ್ನು ಲಲಿತ್ ಝಾ ಎಂದು ಗುರುತಿಸಲಾಗಿದೆ.
ಶೂನ್ಯ ಸಮಯದಲ್ಲಿ ನಡೆದ ಘಟನೆಯ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ದೆಹಲಿ ಪೊಲೀಸರಿಗೆ ಅಗತ್ಯ ಸೂಚನೆಗಳನ್ನು ಸಹ ನೀಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಇದು ಕೇವಲ ಹೊಗೆ ಎಂದು ಕಂಡುಬಂದಿದೆ. ಹೊಗೆಯ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಹೇಳಿದ್ದಾರೆ.