News Karnataka Kannada
Monday, April 29 2024
ಕ್ರೈಮ್

ಟೀ ಅಂಗಡಿಗೆ ಟ್ರಕ್‌ ನುಗ್ಗಿಸಿದ ಚಾಲಕ: ಐವರ ದುರ್ಮರಣ

ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಆ್ಯಂಡ್​ ರನ್​ ಪ್ರಕರಣ ನಡೆದಿದೆ. ಓರ್ವ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ  ನಗರದ  ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ನಡೆದಿದೆ. 
Photo Credit : News Kannada

ಚೆನ್ನೈ: ತಮಿಳುನಾಡಿನಲ್ಲಿ ಘೋರ ದುರಂತವೊಂದು ನಡೆದುಹೋಗಿದೆ. ಚಾಲಕನೊಬ್ಬ ನಿದ್ದೆ ಮಂಪರಿನಲ್ಲಿ ಟೀ ಅಂಗಡಿಯೊಳಗೆ ಟ್ರಕ್‌ ನುಗ್ಗಿಸಿದ ಪರಿಣಾಮ ಐವರು ದಾರುಣವಾಗಿ ಮೃತಪಟ್ಟ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ.

ಇಂದು ಮುಂಜಾನೆ ನಡೆದ ಅವಘಡದಲ್ಲಿ 19 ಮಂದಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಿಮೆಂಟ್‌ ತುಂಬಿದ ಟ್ರಕ್ ಅರಿಯಲೂರಿನಿಂದ ಶಿವಗಂಗೈಗೆ ತೆರಳುತ್ತಿತ್ತು. ಹೀಗೆ ಹೋಗುತ್ತಿದ್ದ ಸಂದರ್ಭದ ಚಾಲಕನಿಗೆ ನಿದ್ದೆ ಬಂದಿದ್ದು, ಪರಿಣಾಮ ಟ್ರಕ್‌ ಚಾಲಕನಿಂದ ನಿಯಂತ್ರಣ ಕಳೆದುಕೊಂಡು ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಟೀ ಅಂಗಡಿಗೆ ನುಗ್ಗಿದೆ.

ಇತ್ತ ಟೀ ಅಂಗಡಿಯಲ್ಲಿ ಶಬರಿಮಲೆ ಯಾತ್ರಾರ್ಥಿಗಳು ಟೀ ಕುಡಿಯುತ್ತಿದ್ದರು. ಈ ವೇಳೆ ಟ್ರಕ್‌ ಏಕಾಏಕಿ ನುಗ್ಗಿದೆ. ಅಪಘಾತದಿಂದ ಟೀ ಅಂಗಡಿ ಬಳಿ ನಿಲ್ಲಿಸಿದ್ದ ಕಾರು ಹಾಗೂ ಇತರೆ ದ್ವಿಚಕ್ರ ವಾಹನಗಳಿಗೂ ಹಾನಿಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು