ರಾಜಸ್ಥಾನ: ಬಿಕನೇರ್ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಕ್ತ ಪ್ರಸಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಂಪತಿ ಹಾಗೂ ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರ್ಥಿಕ ಕಾರಣದಿಂದಲೇ ಇವರೆಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮೃತರನ್ನು ಅಂತ್ಯೋದಯ ನಗರದ ನಿವಾಸಿಗಳಾದ ಹನುಮಾನ್ ಸೋನಿ(45), ಪತ್ನಿ ವಿಮಲಾ(40), ಮೂವರು ಮಕ್ಕಳಾದ ಮೋಹಿತ್(18), ರಿಷಿ(16), ಗುಡಿಯಾ(14) ಎಂದು ಗುರುತಿಸಲಾಗಿದೆ.
ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮರಣೋತ್ತರ ಪರೀಕ್ಷೆಯ ನಂತರವೇ ಕೆಲವು ವಿಷಯಗಳು ಹೊರಬರಬಹುದು ಎಂದು ಸಿಒ ಸಿಟಿ ಹಿಮಾಂಶು ಹೇಳಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821