ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಸುತ್ತಿದ್ದ ಘಟನೆ ನಡೆದಿದೆ.
ಭ್ರೂಣ ಹತ್ಯೆ ಪ್ರಕರಣ ಸಂಬಂಧ ತಿರುಮಲಶೆಟ್ಟಿಹಳ್ಳಿ ಎಸ್ಪಿಜಿ ಆಸ್ಪತ್ರೆಯ ವೈದ್ಯ ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು, ನರ್ಸ್ ಅನಿತಾ, ನರ್ಸ್ ನೇತ್ರಾ, ರೇವತಿ, ರಾಧಿಕಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೆಡಿಕಲ್ ಆ್ಯಕ್ಟ್ 1994, ಯುಎಸ್ 23/1, 2, 3, ಮೆಡಿಕಲ್ ಟರ್ಮಿನೇಷನ್ ಆಪ್ ಪ್ರೆಗ್ನೆಸಿ ಆ್ಯಕ್ಟ್ 1971 ಅಡಿ US 3, 4, IPC ಸೆಕ್ಷನ್ 1860ರ ಅಡಿ, 312, 314, 315, 316ರ ಅಡಿ ಕೇಸ್ ದಾಖಲಾಗಿದೆ.