ಮಂಗಳೂರು: ನಗರದ ಬಲ್ಮಠ ಬಳಿಯ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಮುಂಜಾನೆ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ ಬೆಳ್ಳಂಬೆಳಗ್ಗೆ 5.15ರ ವೇಳೆಗೆ ನಡೆದಿದೆ.
ನಗರದ ಬಂದರ್ ಕಡೆಯಿಂದ ಬರುತ್ತಿದ್ದ ಲಾರಿಯು ಬಂಟ್ಸ್ ಹಾಸ್ಟೆಲ್ ನಿಂದ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುತ್ತಿದ್ದ ಬಸ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಲ್ಲದೆ ಅಪಘಾತ ನಡೆದ ಸ್ಥಳದಲ್ಲಿದ್ದ ಸ್ಟ್ರೀಟ್ ಲೈಟ್ ಕಂಬ, ಸಿಸಿ ಕ್ಯಾಮರಾದ ಕಂಬಗಳಿಗೆ ಹಾನಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.