ಕ್ರೈಮ್

ಕಬ್ಬಿಣ ಕಾಯಿಸಿ ಮೈಮೇಲೆ ಬರೆ ಎಳೆದು ಬಾಲಕಿಗೆ ಮಲತಾಯಿಯ ಚಿತ್ರಹಿಂಸೆ

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಬಾಲಕಿಗೆ ಕಾಯಿಸಿದ ಕಬ್ಬಿಣದಿಂದ ಬರೆ ಎಳೆದು ಮಲತಾಯಿಯೊಬ್ಬಳು ಚಿತ್ರಹಿಂಸೆ ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪವಿತ್ರಾ ಮತ್ತು ಶ್ರೀನಿವಾಸ್​ ದಂಪತಿಯ ಈ ಹೆಣ್ಣು ಮಗಳು ಹುಟ್ಟಿದ್ದು, ಐದು ವರ್ಷಗಳ ಹಿಂದೆ ಪವಿತಾಳಿಗೆ ಶ್ರೀನಿವಾಸ್ ವಿಚ್ಛೇದನವನ್ನೂ ನೀಡಿದ್ದರು. ಬಳಿಕ ಮಮತಾ ಎಂಬಾಕೆಯನ್ನು ಎರಡನೇ ಮದುವೆಯಾಗಿದ್ದರು. ಪತಿ ಕೆಲಸಕ್ಕೆ ಹೋದ ಬಳಿಕ ನಾಲ್ಕನೇ ತರಗತಿ ಓದುತ್ತಿರುವ ಈ ಬಾಲಕಿಗೆ ಮಮತಾ ಚಿತ್ರಹಿಂಸೆ ನೀಡಲು ಆರಂಭಿಸಿದ್ದಾಳೆ. ಬಾಲಕಿ ತುಂಬ ಹಠ ಮಾಡುತ್ತಾಳೆ ಎಂದು ಗಂಡನಿಗೆ ದೂರು ನೀಡುವ ಆಕೆ, ಕಬ್ಬಿಣ ಕಾಯಿಸಿ ಬಾಲಕಿ ಮೈಮೇಲೆ ಬರೆ ಎಳೆದು ಅಮಾನವೀಯವಾಗಿ ವರ್ತಿಸುತ್ತಿದ್ದಾಳೆ.

ಮಲತಾಯಿಯ ಚಿತ್ರಹಿಂಸೆ ತಾಳಲಾರದೆ ಮಾತನಾಡಿದ ಬಾಲಕಿ, ನನ್ನ ಮೇಲೆ ತಾಯಿ ಯಾಕೆ ಹಲ್ಲೆ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಶಾಲೆಯಲ್ಲಿ ಹೊಡೆದಿದ್ದಾರೆ ಎಂದು ತಾಯಿ ತಂದೆಗೆ ಸುಳ್ಳು ಹೇಳುತ್ತಿದ್ದಾಳೆ. ಅಜ್ಜಿ ಮನೆಯಲ್ಲಿ ಇದ್ದಾಗಲೂ ಗಲಾಟೆ ಮಾಡಿ ಕಡೆದುಕೊಂಡು ಬರಲು ತಾಯಿ ಹೇಳಿದ್ದಳು ಎಂದು ಮಲತಾಯಿಯ ಕ್ರೌರ್ಯದ ಬಗ್ಗೆ ತಿಳಿಸಿದ್ದಾಳೆ.

ಸದ್ಯ ಈ ಬಾಲಕಿಯನ್ನು ನಿನ್ನೆ ರಾತ್ರಿ ನೆಲಮಂಗಲದ ದತ್ತು ಕೇಂದ್ರದಲ್ಲಿ ಇರಿಸಲಾಗಿತ್ತು. ಮಲತಾಯಿಯನ್ನು ಮಹಿಳೆಯನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

21 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

30 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

41 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

60 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

1 hour ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago