News Karnataka Kannada
Thursday, May 02 2024
ಕ್ರೈಮ್

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಪತಿ, ಅತ್ತೆಗೆ ಶಿಕ್ಷೆ

ಹಣಕ್ಕಾಗಿ ತಾಯಿಯೇ ಅಪ್ರಾಪ್ತ ಮಗಳನ್ನ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣಕ್ಕೆ ಬಂಧಿಸಿದಂತೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ.
Photo Credit : News Kannada

ಬೀದರ್: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ರುಜುವಾತಾದ ಹಿನ್ನೆಲೆಯಲ್ಲಿ ಮಹಿಳೆಯ ಪತಿ ಹಾಗೂ ಅತ್ತೆಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ಲತಾ ಗುಣವಂತ ಸಾವಿಗೆ ಔರಾದ್‌ ತಾಲ್ಲೂಕಿನ ಕರಕ್ಯಾಳ ಗ್ರಾಮದ ಗುಣವಂತ ಕಾಶಿರಾಮ ಜಾಧವ, ಇವರ ತಾಯಿ ಭಾಗುಬಾಯಿ ಕಾಶಿರಾಮ ಜಾಧವ ಕಾರಣ ಎಂಬುದು ವಿಚಾರಣೆಯಿಂದ ಸಾಬೀತಾಗಿದೆ.

ಗುಣವಂತಗೆ 6 ವರ್ಷ ಸಾದಾ ಶಿಕ್ಷೆ, ಭಾಗುಬಾಯಿಗೆ 3 ವರ್ಷ ಸಾದಾ ಶಿಕ್ಷೆ. ಇಬ್ಬರಿಗೂ ತಲಾ ₹5 ಸಾವಿರ ದಂಡ ವಿಧಿಸಲಾಗಿದೆ. ದಂಡ ಭರಿಸದಿದ್ದಲ್ಲಿ 5 ತಿಂಗಳು ಹೆಚ್ಚಿನ ಸಾದಾ ಶಿಕ್ಷೆ ವಿಧಿಸತಕ್ಕದು ಎಂದು ನ್ಯಾಯಾಧೀಶ ಸಚಿನ್‌ ಕೌಶಿಕ್‌ ಆರ್‌.ಎನ್‌. ಅವರು ಬುಧವಾರ ತಮ್ಮ ತೀರ್ಪಿನಲ್ಲಿ ತಿಳಿಸಿದ್ಧಾರೆ.

‘ನೀನು ನೋಡಲು ಸರಿ ಇಲ್ಲ, ಚೆನ್ನಾಗಿ ಕೆಲಸ ಮಾಡುವುದಿಲ್ಲ. ಮದುವೆ ಸಂದರ್ಭದಲ್ಲಿ ತವರು ಮನೆಯಿಂದ ಹಣ ತೆಗೆದುಕೊಂಡು ಬಂದಿಲ್ಲ. ಹಣ ತೆಗೆದುಕೊಂಡು ಬರದಿದ್ದರೆ ಮಗನಿಗೆ ಇನ್ನೊಂದು ಮದುವೆ ಮಾಡುತ್ತೇವೆ’ ಎಂದು ಅತ್ತೆ ಭಾಗುಬಾಯಿ, ಲತಾಗೆ ಕಿರುಕುಳ ಕೊಟ್ಟಿದ್ದಾರೆ. ಲತಾ ತವರು ಮನೆಯವರಿಗೆ ಘಟನೆ ಕುರಿತು ವಿವರಿಸಿದ್ದಾಳೆ.

ಅವರು ₹50 ಸಾವಿರ ಕೊಟ್ಟು ಕಳಿಸಿದ್ದಾರೆ. ಇದಾದ ನಂತರವೂ ಮೊದಲಿನಂತೆ ಕಿರುಕುಳ ಕೊಡಲು ಆರಂಭಿಸಿದ್ದಾರೆ. ಇದರಿಂದ ಬೇಸತ್ತ ಲತಾ 2016ರ ಸೆಪ್ಟೆಂಬರ್‌ 19ರಂದು ಕರಕ್ಯಾಳ ಗ್ರಾಮದ ನಾಗನಾಥ ಭಾಲೂರೆ ಅವರ ಹೊಲದ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರವಾಗಿ ವಕೀಲ ಶರಣಗೌಡ ವಾದ ಮಂಡಿಸಿದ್ದರು.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು