ಬೆಂಗಳೂರು: ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಮತ್ತು ಹಾಲಿ ಡಿಎಂಕೆ ಸಂಸದ ಎಸ್ ಜಗತ್ರಕ್ಷಕ್ ಅವರಿಗೆ ಸೇರಿರುವ ಚೆನ್ನೈನಲ್ಲಿರುವ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಂಸತ್ ಸದಸ್ಯ ಮತ್ತು ಪಲ್ಲವರಂ ಮತ್ತು ಕ್ರೋಮ್ಪೇಟ್ನಲ್ಲಿರುವ ಸಂಸದರ ಸಂಬಂಧಿಕರ ಮನೆಗಳು, ಅವರಿಗೆ ಸಂಬಂಧಿಸಿದ ಚೆನ್ನೈನ ಟಿ.ನಗರ ಪ್ರದೇಶದ ಹೋಟೆಲ್ನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ ಎಂದು ವರದಿ ಆಗಿದೆ. ಇನ್ನು ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಸ ಆರ್. ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.