News Karnataka Kannada
Saturday, May 04 2024
ಕ್ರೈಮ್

ಅಕ್ರಮವಾಗಿ ಸಂಗ್ರಹಿಸಿದ್ದ ಆನೆದಂತ, ಶ್ರೀಗಂಧ ರಕ್ತಚಂದನ ವಶ

Illegally stored elephant tusks, sandalwood and red sandalwood seized
Photo Credit : News Kannada

ಚಿತ್ರದುರ್ಗ: ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಬಳಿಯ ಮನೆಯೊಂದರ ಮೇಲೆ ಪೊಲೀಸರು  ದಾಳಿ ಮಾಡಿ, 3 ಕೋಟಿ ಮೌಲ್ಯದ ಆನೆದಂತ, ಶ್ರೀಗಂಧ ಮತ್ತು ರಕ್ತಚಂದನವನ್ನು ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮೂಲದ ಚಂದ್ರಶೇಖರ್ ಹಾಗೂ ತಮಿಳುನಾಡು ಮೂಲದ ಖಲೀಲ್‌ ಆರೋಪಿಗಳು.

ಸೌದೆ ವ್ಯಾಪಾರ ಮಾಡುವುದಾಗಿ ಹೇಳಿ‌ ಬಬ್ಬೂರು ಗ್ರಾಮದ ಬಳಿ ನಾರಾಯಣಪ್ಪ ಎಂಬುವರ ಮನೆಯನ್ನು ಲೀಸ್​​​​​ಗೆ ಪಡೆದು ಮನೆಯಲ್ಲಿ ಅಕ್ರಮವಾಗಿ ಆನೆದಂತ, ಶ್ರೀಗಂಧ ಮತ್ತು ರಕ್ತಚಂದನ ಸಂಗ್ರಹಿಸಿದ್ದರು.

ಖಚಿತ ಮಾಹಿತಿ ಮೇರೆಗೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಠಾಣೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು 3 ಕೋಟಿ ಮೌಲ್ಯದ ವಸ್ತು ಜಪ್ತಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು