ಚಾಮರಾಜನಗರ: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹೊಣಕನಪುರ ಗ್ರಾಮದಲ್ಲಿ ನಡೆದಿದ್ದು, ಈಕೆಯ ಸಾವಿಗೆ ಯುವಕನೊಬ್ಬ ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಪೋಷಕರು ದೂರು ನೀಡಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಹೊಣಕನಪುರ ಗ್ರಾಮದ ನಿವಾಸಿ ಗುರುಸ್ವಾಮಿ ಎಂಬುವರ ಪುತ್ರಿ ಐಶ್ವರ್ಯ (16) ಎಂಬಾಕೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ನಂಜನಗೂಡಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಈಕೆಗೆ ಪಕ್ಕದ ಗ್ರಾಮದ ಯಡವನಹಳ್ಳಿ ಶ್ರೀನಿವಾಸ್ ಎಂಬ ಯುವಕ ಕರೆ ಮಾಡಿ ತೊಂದರೆ ನೀಡುತ್ತಿದ್ದ ಎಂದು ತಂದೆ ಗುರುಸ್ವಾಮಿ ಹೇಳಿದ್ದಾರೆ. ಈ ವಿಚಾರವಾಗಿ ಮಗಳು ನನಗೆ ತಿಳಿಸಿದ್ದಳು. ನಾನು ಶ್ರೀನಿವಾಸ್ ಹಾಗೂ ಅವರ ತಂದೆ ತಾಯಿಗೆ ಈ ಸಂಬಂಧ ತಿಳಿ ಹೇಳಿದ್ದೆ. ಆದರೆ ನನ್ನ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ.
ಯುವಕ ಶ್ರೀನಿವಾಸ್ ಕಿರುಕುಳ ನೀಡಿದ್ದರಿಂದಲೇ ಮನನೊಂದು ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದಿರುವ ಗುರುಸ್ವಾಮಿ ಮತ್ತು ತಾಯಿ ಪ್ರೇಮಾ ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…