ಗರಿಯಾಬಂದ್: ಛತ್ತೀಸ್ ಗಢ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದ ಗರಿಯಾಬಂದ್ ಜಿಲ್ಲೆಯಲ್ಲಿ ಇಂದು(ನ.17) ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಭದ್ರತಾ ಸಿಬ್ಬಂದಿಯ ಬೆಂಗಾವಲಿನಲ್ಲಿ ಬಂದಿದ್ದ ಮತಗಟ್ಟೆ ತಂಡವು ಮತದಾನ ಮುಗಿಸಿ ಹಿಂತಿರುಗುತ್ತಿದ್ದಾಗ ಬಡೇ ಗೊಬ್ರಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಕ್ಸಲೀಯರು ಸ್ಫೋಟವನ್ನು ಪ್ರಚೋದಿಸಿದ್ದು, ಹುತಾತ್ಮ ಐಟಿಬಿಪಿ ಸಿಬ್ಬಂದಿಯನ್ನು ಹೆಡ್ ಕಾನ್ಸ್ಟೆಬಲ್ ಜೋಗಿಂದರ್ ಸಿಂಗ್ ಎಂದು ಗುರುತಿಸಲಾಗಿದೆ.