ಕಲಬುರಗಿ: ಅಪಘಾತದಲ್ಲಿ ಆಗಿದ್ದ ಗಾಯವನ್ನು ತೋರಿಸಿ ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ನನ್ನು ಪೊಲೀಸರು ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್ನಲ್ಲಿ ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ.
ಅಪಘಾತವನ್ನು ಕೊಲೆ ಯತ್ನ ಎಂದು ಬಿಂಬಿಸಿದ್ದ ಮಣಿಕಂಠ ರಾಠೋಡನ ಅಸಲಿಯತ್ತು ಪೊಲೀಸ್ ತನಿಖೆಯಲ್ಲಿ ಬಯಲಾಗಿತ್ತು. ಇದರ ಬೆನ್ನಲ್ಲೇ ಇಂದು ಮಣಿಕಂಠ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಆದ್ರೆ, ಪೊಲೀಸರು ಸುದ್ದಿಗೋಷ್ಠಿ ನಡೆಸುವ ಮುನ್ನವೇ ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರು ಅಪಘಾತವನ್ನೇ ಹಲ್ಲೆ ಮಾಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪಿಸಿದ್ದ ಮಣಿಕಂಠ ರಾಠೋಡ್ ಅಸಲಿಯತ್ತು ಬಯಲಾಗಿದೆ.